ಮಿಚಾಂಗ್ ಚಂಡಮಾರುತಕ್ಕೆ ಆಂಧ್ರ – ತಮಿಳುನಾಡು ತತ್ತರ; 120 ರೈಲುಗಳ ಸಂಚಾರ ರದ್ದು

Date:

Advertisements

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ, ಡಿಸೆಂಬರ್ 6ರವರೆಗೆ ಚೆನ್ನೈ ಜೊತೆ ಸಂಪರ್ಕ ಒದಗಿಸುತ್ತಿದ್ದ ಸುಮಾರು 120 ರೈಲುಗಳನ್ನು ರದ್ದುಗೊಳಿಸಲಾಗಿದೆ. ಅವುಗಳಲ್ಲಿ ಬಹುತೇಕ ರೈಲುಗಳು ಆಂಧ್ರ ಮತ್ತು ತೆಲಂಗಾಣ ಮೂಲಕ ಹಾದುಹೋಗುವ ರೈಲುಗಳಾಗಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

“ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಭಾನುವಾರ ಮುಂಜಾನೆಯಿಂದ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ. ಚಂಡಮಾರುತವು ವಾಯವ್ಯ ಭಾಗದ ಕಡೆಗೆ ಚಲಿಸುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ನೆಲ್ಲೂರು ಮತ್ತು ಮಚಲಿಪಟ್ಟಣಂ ಹಾಗೂ ಉತ್ತರ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿದ ಈ ನಾಲ್ಕೂ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

Advertisements

ವೆಲ್ಲೂರು, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ವಿಲ್ಲುಪುರಂ, ಕಡಲೂರು, ಕಲ್ಲಕುರಿಚಿ ಮತ್ತು ತಿರುಪತ್ತೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರೀ ಮಳೆಯಿಂದಾಗಿ 120 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಚೆನ್ನೈ, ಬೆಂಗಳೂರು ಮತ್ತು ತಿರುವನಂತಪುರದಿಂದ ದೆಹಲಿ, ಧನಾಪುರ, ಸಂತ್ರಗಚಿ, ಪಾಟ್ನಾ, ವಿಶಾಖಪಟ್ಟಿಣಂ, ವಿಜಯವಾಡ ಮತ್ತು ಹೌರಾ ಸೇರಿದಂತೆ ದೇಶದ ಉತ್ತರ ಭಾಗಕ್ಕೆ ಹೋಗುವ ಹಲವಾರು ರೈಲುಗಳು ರದ್ದಾಗಿವೆ. ಚೆನ್ನೈ ಸೆಂಟ್ರಲ್, ಚೆನ್ನೈ ಎಗ್ಮೋರ್ ಮತ್ತು ತಾಂಬರಂನಿಂದ ಹೊರಡುವ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆ ರದ್ದಾಗಿದೆ. ರದ್ದಾಗಿರುವ ರೈಲುಗಳಲ್ಲಿ ಟಿಕೆಟ್‌ ಖಾಯ್ದಿರಿಸಿದ್ದ ರೈಲು ಪ್ರಯಾಣಿಕರಿಗೆ ಟಿಕೆಟ್ ದರದ ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ರೈಲ್ವೇ ಭರವಸೆ ನೀಡಿದೆ.

ಚೆನ್ನೈ-ಸೂಲೂರ್‌ಪೇಟ್ಟೈ ಮತ್ತು ಚೆನ್ನೈ-ಅರ್ಕಾಕೋಣಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ಉಪನಗರ ರೈಲುಗಳು ಕೂಡ ರದ್ದಾಗಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X