ಗುಜರಾತ್ | ದಲಿತ ವಿರೋಧಿ ಹೇಳಿಕೆ; ಜಿಲ್ಲಾಧಿಕಾರಿ ಅಮಾನತಿಗೆ ಜಿಗ್ನೇಶ್ ಮೇವಾನಿ ಆಗ್ರಹ

Date:

Advertisements

ಗುಜರಾತ್‌ನ ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಮಾತ್ರ ದಲಿತ ವಿರೋಧಿ ಹೇಳಿಕೆ ಆರೋಪವನ್ನು ತಿರಸ್ಕರಿಸಿದ್ದಾರೆ.

ತಮ್ಮ ಮತ್ತು ತಮ್ಮ ಪಕ್ಷದ ಸಹೋದ್ಯೋಗಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಜ್‌ಕುಮಾರ್ ಪಾಂಡಿಯನ್ ಅವರನ್ನು ಅಮಾನತುಗೊಳಿಸಬೇಕು ಎಂದು ಜಿಗ್ನೇಶ್ ಮೇವಾನಿ ಒಂದು ವಾರದ ಹಿಂದಷ್ಟೇ ಅಗ್ರಹಿಸಿದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಥವಾ ದೌರ್ಜನ್ಯ ಕಾಯ್ದೆಯಡಿ ದಾಖಲಾದ ಶೇಕಡ 90ರಷ್ಟು ಪ್ರಕರಣಗಳು ಬ್ಲ್ಯಾಕ್‌ಮೇಲಿಂಗ್‌ಗೆ ಬಳಕೆಯಾಗುತ್ತಿದೆ ಎಂದು ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಹೇಳಿದ್ದರು. ಈ ವಿಡಿಯೋವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಮೇವಾನಿ ಆಗ್ರಹಿಸಿದ್ದಾರೆ. ಜೊತೆಗೆ ಎಫ್‌ಐಆರ್ ದಾಖಲಿಸಬೇಕೆಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಗುಜರಾತ್ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ವಿಧಾನಸಭೆಯಿಂದ ಉಚ್ಚಾಟನೆ

ಇನ್ನು ಐಎಎಸ್ ಅಧಿಕಾರಿ ನೇಹಾ ಕುಮಾರಿ ಅವರು ಶಾಸಕ ಮೇವಾನಿ ಆರೋಪವು ‘ಆಧಾರರಹಿತ’ ಮತ್ತು ರಾಜಕೀಯ ಮೈಲೇಜ್ ಪಡೆಯುವ ವಿಫಲ ಪ್ರಯತ್ನ ಎಂದು ಬಣ್ಣಿಸಿದ್ದಾರೆ.

ವಿಜಯ್ ಪರ್ಮಾರ್ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಹೋದಾಗ ಜಿಲ್ಲಾಧಿಕಾರಿ ಕೆಟ್ಟದಾಗಿ ನಡೆಸಿದ್ದಾರೆ, ಅವಮಾನ ಮಾಡಿದ್ದಾರೆ. ದೌರ್ಜನ್ಯ ಕಾಯ್ದೆಯಡಿಯಲ್ಲಿನ ಶೇಕಡ 90ರಷ್ಟು ಪ್ರಕರಣಗಳನ್ನು ಬ್ಲ್ಯಾಕ್‌ಮೇಲಿಂಗ್‌ಗಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಜಿಲ್ಲಾಧಿಕಾರಿಯ ಹೇಳಿಕೆಯು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಅವಮಾನವಾಗಿದೆ. ದೌರ್ಜನ್ಯ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅಪರಾಧವಾಗಿದೆ ಎಂದು ಮೇವಾನಿ ಹೇಳಿದ್ದಾರೆ.

“ಶಾಸಕರ ಅಮಾಯಕ ಯುವ ಸ್ನೇಹಿತ (ವಿಜಯ್ ಪರ್ಮಾರ್) ಎಂಬ ವ್ಯಕ್ತಿ ವಿರುದ್ಧ ಪೊಲೀಸ್ ಕೇಸ್ ಇದೆ. ಅವನ ಸಹೋದರನ ವಿರುದ್ಧ ಒಂದಕ್ಕಿಂತ ಹೆಚ್ಚು ಅತ್ಯಾಚಾರ, ಅಪಹರಣ ಮತ್ತು ಹಲ್ಲೆ ಪ್ರಕರಣಗಳಿವೆ. ಅವರು ಹಲವು ಕುಂದುಕೊರತೆಗಳ ವಿಚಾರ ಪ್ರಸ್ತಾಪಿಸಲು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡುತ್ತಲೇ ಇರುತ್ತಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X