ಸಲಿಂಗ ಮದುವೆ ಮಾನ್ಯತೆ ಕೋರಿ ಅರ್ಜಿ; ತೀರ್ಪು ನೀಡದಂತೆ ಸುಪ್ರೀಂಗೆ ಕೇಂದ್ರದ ಮನವಿ

Date:

  • ಐವರು ನ್ಯಾಯಮೂರ್ತಿಗಳ ಪೀಠದಿಂದ ಅರ್ಜಿ ವಿಚಾರಣೆ
  • ಸಲಿಂಗ ಮದುವೆ ಮಾನ್ಯತೆ ಕೋರಿರುವ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದ ಕೇಂದ್ರ

ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ತೀರ್ಪು ನೀಡದೇ ಹಿಂದಕ್ಕೆ ಸರಿಯಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.

- Advertisement -

ಸಲಿಂಗ ಮದುವೆಗೆ ಶಾಸನ ಮಾನ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೆಲವರು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಿಚಾರಣೆ ವೇಳೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ, “ಸಲಿಂಗ ಮದುವೆಯು ಇತ್ತೀಚಿನ ದಿನಗಳಲ್ಲಿ ಮಹಾ ನಗರಗಳಲ್ಲಿ ವಾಸಿಸುತ್ತಿರುವ ಕೆಲವು ವರ್ಗಗಳ ಜನರ ಮನಃಸ್ಥಿತಿಯಾಗಿದೆ. ಆದ್ದರಿಂದ ಇಂತಹ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು” ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? : ಈ ದಿನ ಸಂಪಾದಕೀಯ | ಕೇಡಿನ ಕಾಲದ ದಿಟ್ಟ ದನಿಗಳು, ಈ ನ್ಯಾಯಮೂರ್ತಿಗಳು

“ಹಲವು ವ್ಯಕ್ತಿಗಳು ಸಲ್ಲಿಸಿರುವ ಅರ್ಜಿಗಳು ವಿಚಾರಣೆಗೇ ಅರ್ಹವಾಗಿಲ್ಲ. ಕೆಲವರು ಸಾಮಾಜಿಕ ಸ್ವೀಕೃತಿ ಪಡೆದುಕೊಳ್ಳುವ ಉದ್ದೇಶದಿಂದ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ” ಎಂದು ಕೇಂದ್ರ ಸರ್ಕಾರ ವಾದಿಸಿದೆ.

“ಒಂದು ವೇಳೆ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಿದರೆ, ದೇಶದಲ್ಲಿ ಇದುವರೆಗೂ ಮದುವೆ ವಿಚಾರವಾಗಿ ನಡೆದುಕೊಂಡು ಬಂದಿರುವ ಸಂಪ್ರದಾಯಗಳ ಮೇಲೆ ಪರಿಣಾಮ ಬೀರಿದಂತಾಗುತ್ತದೆ” ಎಂದು ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...