ಖ್ಯಾತ ಪರಮಾಣು ವಿಜ್ಞಾನಿ ಡಾ ಆರ್ ಚಿದಂಬರಂ ನಿಧನ

Date:

Advertisements

ದೇಶದ ಖ್ಯಾತ ಪರಮಾಣು ವಿಜ್ಞಾನಿ, ಸ್ಫಟಿಕಶಾಸ್ತ್ರಜ್ಞ ಡಾ ಆರ್ ಚಿದಂಬರಂ ಅವರು ತನ್ನ 88ನೇ ವಯಸ್ಸಿನಲ್ಲಿ ಮುಂಬೈನಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

1974 ಮತ್ತು 1998ರಲ್ಲಿ ಪೋಖ್ರಾನ್‌–1 ಪರೀಕ್ಷೆ ಮತ್ತು ಪೋಖ್ರಾನ್‌-2 ಪರೀಕ್ಷೆಯಲ್ಲಿ ಡಾ. ಆರ್ ಚಿದಂಬರಂ ಸಂಯೋಜಕರಾಗಿದ್ದರು. ಹಾಗೆಯೇ ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರೂ ಆಗಿದ್ದರು.

ಇದನ್ನು ಓದಿದ್ದೀರಾ? ಜಿ ಸಿ ಬಯ್ಯಾರೆಡ್ಡಿ ನಿಧನ | ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಗಣ್ಯರ ಸಂತಾಪ

Advertisements

ಪರಮಾಣು ವಿಜ್ಞಾನಿಯಾಗಿ ಅವರು ನೀಡಿದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. 1974 ರಲ್ಲಿ ಸ್ಮೈಲಿಂಗ್ ಬುದ್ಧ ಮತ್ತು 1998ರಲ್ಲಿ ಆಪರೇಷನ್ ಶಕ್ತಿ ಎರಡಕ್ಕೂ ಆರ್ ಚಿದಂಬರಂ ಕೊಡುಗೆ ನೀಡಿದ್ದಾರೆ.

ಭಾಭಾ ಪರಮಾಣು ಸಂಶೋಧನಾ ಕೇಂದ್ರದ (ಬಿಎಆರ್‌ಸಿ) ನಿರ್ದೇಶಕರಾಗಿ, ಪರಮಾಣು ಶಕ್ತಿ ಆಯೋಗದ (ಎಇಸಿ) ಅಧ್ಯಕ್ಷರಾಗಿ, ಪರಮಾಣು ಶಕ್ತಿ ಇಲಾಖೆಯ (ಡಿಎಇ) ಕಾರ್ಯದರ್ಶಿಯಾಗಿ ಡಾ. ಆರ್ ಚಿದಂಬರಂ ಕಾರ್ಯ ನಿರ್ವಹಿಸಿದ್ದರು.

ಆರ್ ಚಿದಂಬರಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X