ಟ್ರಕ್ ಒಂದು ಆಳವಾದ ಕಮರಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ
ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದೆ. ಮೃತ ಯೋಧರನ್ನು ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಎಂದು ಗುರುತಿಸಲಾಗಿದೆ.
ಈಸ್ಟರ್ನ್ ಕಮಾಂಡ್ನ ಎಕ್ಸ್ ಪೋಸ್ಟ್ನಲ್ಲಿ, “ಲೆಫ್ಟಿನೆಂಟ್ ಜನರಲ್ ಆರ್ಸಿ ತಿವಾರಿ, ಆರ್ಮಿ ಸಿಡಿಆರ್ ಇಸಿ ಮತ್ತು ಎಲ್ಲಾ ಶ್ರೇಣಿಗಳು ಧೀರರಾದ ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ನಿಧನಕ್ಕೆ ತೀವ್ರ ಸಂತಾಪಗಳು” ಎಂದು ಹೇಳಿದೆ.
#IndianArmy #EasternCommand #InTheLineofDuty#LestWeForget
— EasternCommand_IA (@easterncomd) August 27, 2024
Lt Gen RC Tiwari, #ArmyCdrEC & All Ranks express deepest condolences on the sad demise of Bravehearts Hav Nakhat Singh, Nk Mukesh Kumar and Gdr Ashish who made the supreme sacrifice in the line of duty in… pic.twitter.com/LcRAdHKK5h
