ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

Date:

Advertisements

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಕ್ಕೆ ಎರಡು ಪಕ್ಷಗಳು ಒಟ್ಟಾಗಿವೆ ಎಂದು ತಿಳಿಸಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿರುವ ಅವರು, ಜೂನ್‌ 4ರಂದು ದೊಡ್ಡ ಆಶ್ಚರ್ಯಕ್ಕಾಗಿ ಕಾದಿದ್ದು ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟ ಇಂಡಿಯಾ ಗೆಲುವು ಗಳಿಸಲಿದೆ ಎಂದು ಹೇಳಿದ್ದಾರೆ.

“ಎಎಪಿಯು ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ. ಈಗ ನಮ್ಮ ಉದ್ದೇಶ ಬಿಜೆಪಿ ಸೋಲಿಸುವುದಾಗಿದೆ ಹಾಗೂ ಪ್ರಸ್ತುತ ಆಡಳಿತದಲ್ಲಿರುವ ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ಕೊನೆಗೊಳಿಸುವುದಾಗಿದೆ” ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Advertisements

ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಒಕ್ಕೂಟ ಮಾಡಿಕೊಂಡಿದ್ದರೆ, ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಕಣಕ್ಕಿಳಿದಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಕಳಿಸುವ ಮೋದಿ ಗ್ಯಾರಂಟಿಯು ‘ಜನತಂತ್ರದ ಜನನಿ’ಯ ಅಣಕ ಅಲ್ಲವೇ?

“ದೇಶವನ್ನು ಕಾಪಾಡುವುದು ಮುಖ್ಯವಾಗಿದೆ. ಎಎಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಬಿಜೆಪಿಯನ್ನು ಸೋಲಿಸಲು ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಪಂಜಾಬ್‌ನಲ್ಲಿ ಬಿಜೆಪಿಗೆ ಯಾವುದೇ ಅಸ್ತಿತ್ವವಿಲ್ಲ” ಎಂದು ಕೇಜ್ರಿವಾಲ್ ಹೇಳಿದರು.

ಇದೇ ಸಂದರ್ಭದಲ್ಲಿ ದೆಹಲಿ ಅಬಕಾರಿ ಹಗರಣದ ಬಗ್ಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ನಾನು ಜೈಲಿಗೆ ಹೋಗುವುದು ಸಮಸ್ಯೆಯಲ್ಲ. ಈ ದೇಶದ ಭವಿಷ್ಯ ಅಪಾಯದಲ್ಲಿದೆ. ಅವರು ಎಷ್ಟು ದಿನ ನನ್ನನ್ನು ಜೈಲಿಗೆ ಹಾಕಲಿ ನಾನು ಹೆದರುವುದಿಲ್ಲ. ಬಿಜೆಪಿಯವರು ನನ್ನನ್ನು ಕೆಳಗಿಳಿಸಲು ಬಯಸುತ್ತಾರೆ ಆದರೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಜ್ರಿವಾಲ್ ಹೇಳಿದರು.

ಒಂದು ವೇಳೆ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಎಲ್ಲ ವಿಪಕ್ಷ ನಾಯಕರು ಜೈಲಿನಲ್ಲಿರುತ್ತಾರೆ. ರಷ್ಯಾದಲ್ಲಿ ವ್ಲಾಡಿಮಿರ್ ಪುಟಿನ್‌ ಆಡಳಿದ ಪರಿಸ್ಥಿತಿ ಇಲ್ಲಿಯೂ ಉಂಟಾಗುತ್ತದೆ ಎಂದು ಕೇಜ್ರಿವಾಲ್ ಎಚ್ಚರಿಸಿದರು.

ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಜೂನ್‌ 2ರೊಳಗೆ ನ್ಯಾಯಾಲಯಕ್ಕೆ ಶರಣಾಗಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X