ಅಬಕಾರಿ ಹಗರಣ ಸಂಬಂಧಿಸಿ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸಿಬಿಐ ಸಮನ್ಸ್ ನೀಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ಸಿಸೋಡಿಯಾ ಅವರು ಏಪ್ರಿಲ್ 17ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಆರೋಪದ ಪ್ರಕರಣದಲ್ಲಿ ಅವರು ಏಪ್ರಿಲ್ 27ರಂದು ವಿಚಾರಣೆಗೆ ಹಾಜರಾಗಬೇಕೆಂದು ಗೋವಾ ಪೊಲೀಸರು ಕೂಡ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
“ದೇಶದ ಪ್ರಗತಿ ಬಯಸದ ಹಲವು ದೇಶವಿರೋಧಿ ಶಕ್ತಿಗಳು ರಾಷ್ಟ್ರದಲ್ಲಿವೆ. ಇವರೆಲ್ಲ ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದರು. ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದ ದೇಶದ ಶತ್ರುಗಳೆ ಎಎಪಿಯ ಎಲ್ಲ ನಾಯಕರನ್ನು ಸೆರೆಮನೆಗೆ ಕಳುಹಿಸಲು ಹೊಂಚು ಹಾಕಿವೆ” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಕೇಜ್ರಿವಾಲ್ ಸರ್ಕಾರ ಅಬಕಾರಿ ಹಗರಣ ಮಾಡಿ ಭಾರೀ ವಂಚನೆ ಎಸಗಿದೆ ಎಂದು ಸಿಬಿಐ ಆರೋಪಿಸಿದೆ. ಸಂಸ್ಥೆಯೊಂದರ ಪರವಾಗಿ ಅಬಕಾರಿ ನೀತಿ ರೂಪಿಸಲು ಲಂಚ ಪಡೆಯಲಾಗಿತ್ತು ಎಂದೂ ಸಿಬಿಐನ ಆಪಾದನೆ. ಈ ಆರೋಪಗಳನ್ನು ತಳ್ಳಿಹಾಕಿರುವ ಎಎಪಿ, ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದೆ.