ಅರವಿಂದ್ ಕೇಜ್ರಿವಾಲ್ ಬಂಧನ ಕಾಂಗ್ರೆಸ್‌ಗೆ ಒಂದು ಜೀವನ ಪಾಠ: ಪಿಣರಾಯಿ ವಿಜಯನ್

Date:

Advertisements

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಂದಿನ ಸ್ಥಿತಿಯು ಕಾಂಗ್ರೆಸ್‌ಗೆ ಒಂದು ಜೀವನ ಪಾಠವಾಗಿದೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

ಸಿಪಿಐಎಂ, ಕಾಂಗ್ರೆಸ್‌ ಸೇರಿ 18 ವಿಪಕ್ಷಗಳು ಭಾನುವಾರ (ಮಾರ್ಚ್ 31) ನವದೆಹಲಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದೆ. ಇದಾದ ಒಂದು ದಿನದ ಬಳಿಕ ಕೇರಳ ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ನಡೆಸಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ತನಿಖೆಗೆ ಆಗ್ರಹಿಸಿದ್ದ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ ದಿಕ್ಕು ತಪ್ಪಿಸಲು ಕೇಜ್ರಿವಾಲ್ ಬಂಧನ: ಪಿಣರಾಯಿ ವಿಜಯನ್

Advertisements

“ಕೇಜ್ರಿವಾಲ್ ಪ್ರಕರಣವು ಕಾಂಗ್ರೆಸ್‌ನ ದಾರಿಯ ಒಂದು ಉತ್ತಮ ಉದಾಹರಣೆಯಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪವಿದ್ದಾಗ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. ಕಾಂಗ್ರೆಸ್‌ ಈ ಪ್ರಕರಣದಲ್ಲಿ ದೂರನ್ನು ಕೂಡಾ ದಾಖಲಿಸಿತ್ತು. ಇದರ ಪರಿಣಾಮವಾಗಿ ಈಗ ಇಡಿ ತನಿಖೆ ನಡೆಲಾಗುತ್ತಿದೆ” ಎಂದು ಹೇಳಿದರು.

“ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದ್ದು ಕೇಜ್ರಿವಾಲ್‌ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು. ಕೇಜ್ರಿವಾಲ್ ಬಂಧನವಾಗುವವರೆಗೂ ಈ ಪ್ರಶ್ನೆಯನ್ನು ಕಾಂಗ್ರೆಸ್ ಎತ್ತಿದೆ. ಈಗ ಕಾಂಗ್ರೆಸ್ ತನ್ನ ನಿಲುವನ್ನು ಬದಲಾಯಿಸಿದೆ. ಆದರೆ ಈಗ ಕಾಂಗ್ರೆಸ್ ತನ್ನ ಹಿಂದಿನ ನಿಲುವು ತಪ್ಪಾಗಿತ್ತು ಎಂದು ಒಪ್ಪಿಕೊಳ್ಳಬೇಕಾಗುತ್ತದೆ” ಎಂದು ವಿಜಯನ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X