ಜಮ್ಮುವಿನಲ್ಲಿನ ಹಿಂದೂಗಳಿಗೆ ಎಷ್ಟು ಹಣ ನೀಡಿದ್ದೀರಿ; ದಿ ಕಾಶ್ಮೀರ್ ಫೈಲ್ಸ್ ಚಿತ್ರತಂಡಕ್ಕೆ ನಟಿ ಆಶಾ ಪರೇಖ್ ಪ್ರಶ್ನೆ

Date:

Advertisements

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಹಿಂದೂಗಳಿಗೆ ಚಿತ್ರದ ಗಳಿಕೆಯ ಒಂದು ಭಾಗವನ್ನು ದೇಣಿಗೆ ನೀಡದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ಮಾಪಕರನ್ನು ಬಾಲಿವುಡ್ ನಟಿ ಆಶಾ ಪರೇಖ್ ಅವರು ತರಾಟೆಗೆ ತೆಗೆದುಕೊಂಡರು.

ಇತ್ತೀಚಿಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ಮಾಪಕರು 200 ಕೋಟಿ ರೂ. ಗಳಿಸಿದ್ದಾರೆ ಎಂದು ಭಾವಿಸೋಣ. ಸಿನಿಮಾದ ಗಳಿಕೆಯಲ್ಲಿ ಅವರು ಕಾಶ್ಮೀರಿ ಹಿಂದೂಗಳಿಗೆ ಸಹಾಯ ಮಾಡಲು 50 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಬಹುದಿತ್ತು. ಜಮ್ಮುವಿನಲ್ಲಿ ನೀರು ಮತ್ತು ವಿದ್ಯುತ್ ಸಂಪರ್ಕವಿಲ್ಲದೆ ವಾಸಿಸುವ ಹಿಂದೂಗಳ ಕಲ್ಯಾಣಕ್ಕಾಗಿ ಸಿನಿಮಾ ತಯಾರಕರು ಎಷ್ಟು ಹಣವನ್ನು ನೀಡಿದ್ದಾರೆ” ಎಂದು ಆಶಾ ಪರೇಖ್ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮದುವೆಗಳ ನೆಪ; ರಾಜಸ್ಥಾನ ಚುನಾವಣಾ ದಿನಾಂಕ ಬದಲಿಸಿದ ಚುನಾವಣಾ ಆಯೋಗ

Advertisements

ಸಂದರ್ಶನದ ಸಮಯದಲ್ಲಿ, ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ಕೇರಳ ಸ್ಟೋರಿ’ಯಂತಹ ‘ವಿವಾದಾತ್ಮಕ ಚಿತ್ರಗಳನ್ನು’ ವೀಕ್ಷಿಸಿದ್ದೀರಾ ಎಂದು ಆಶಾ ಅವರನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ಇಂತಹ ಸಿನಿಮಾಗಳಿಂದ ಜನರಿಗೆ ಏನು ಲಾಭ’ ಎಂದು ಪ್ರಶ್ನಿಸಿದರು. ‘ನಾನು ಆ ಚಿತ್ರಗಳನ್ನು ನೋಡಿಲ್ಲ, ಹಾಗಾಗಿ ಅವುಗಳ ಸುತ್ತಲಿನ ವಿವಾದಗಳ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ” ಎಂದರು.

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವಿವೇಕ್ ರಂಜನ್ ಅಗ್ನಿಹೋತ್ರಿ ಕಥೆ ಬರೆದು ನಿರ್ದೇಶಿಸಿದ್ದಾರೆ ಮತ್ತು ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು ಜೀ ಸ್ಟುಡಿಯೋ ಸಿನಿಮಾವನ್ನು ನಿರ್ಮಿಸಿದೆ. ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ಪುನೀತ್ ಇಸ್ಸಾರ್, ದರ್ಶನ್ ಕುಮಾರ್, ಪ್ರಕಾಶ್ ಬೆಳವಾಡಿ, ಮೃಣಾಲ್ ಕುಲಕರ್ಣಿ ಮತ್ತು ಚಿನ್ಮಯ್ ಮಾಂಡ್ಲೇಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಸಿನಿಮಾದಲ್ಲಿ ಮುಸ್ಲಿಂ ಸಮುದಾಯವನ್ನು ವಿವಾದಾತ್ಮಕವಾಗಿ ತೋರಿಸಿದ ಕಾರಣ ದೇಶದ್ಯಾಂತ  ಆಕ್ರೋಶ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X