ಕೇಂದ್ರ, ರಾಜ್ಯ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಅಸ್ಸಾಂ ಪ್ರತ್ಯೇಕತಾವಾದಿ ಗುಂಪು ಉಲ್ಫಾ ಸಹಿ

Date:

Advertisements

ಅಸ್ಸಾಂನ ಪ್ರತ್ಯೇಕತಾವಾದಿ ಗುಂಪು ‘ಉಲ್ಫಾ’ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಇತ್ಯರ್ಥ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು.

ಒಪ್ಪಂದಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂನ ಉಜ್ವಲ ಭವಿಷ್ಯದ ದಿನಕ್ಕಾಗಿ ಇಂದಿನ ಘಟನೆಯು ನನಗೆ ಸಂತಸವನ್ನು ಉಂಟುಮಾಡಿದೆ. ಸುದೀರ್ಘ ಕಾಲದಿಂದ ಅಸ್ಸಾಂ ಹಾಗೂ ಈಶಾನ್ಯ ಭಾಗವು ಹಿಂಸಾಚಾರಕ್ಕೆ ಒಳಗಾಗಿದೆ ಎಂದು ಹೇಳಿದರು.

“ನೀವು ಗೃಹ ಇಲಾಖೆ ಕಡೆಯಿಂದ ಭಾರತ ಸರ್ಕಾರದ ಮೇಲೆ ನಂಬಿಕೆ ಇರಿಸಿದ್ದಕ್ಕಾಗಿ ‘ಉಲ್ಪಾ’ ಪ್ರತಿನಿಧಿಗಳಿಗೆ ನಾನು ಭರವಸೆ ನೀಡುತ್ತೇನೆ. ನೀವು ಕೇಳುವ ಅಗತ್ಯವಿಲ್ಲದೆ ಎಲ್ಲವನ್ನು ಕಾಲಮಿತಿಯೊಳಗೆ ಪೂರೈಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಅಮಿತ್ ಶಾ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

‘ಉಲ್ಫಾ’ ಸಂಘಟನೆ ಒಪ್ಪಂದಕ್ಕೆ ಸಹಿ ಹಾಕಿರುವುದು ಸಂಪೂರ್ಣ ಈಶಾನ್ಯ ರಾಜ್ಯ ಹಾಗೂ ಪ್ರಮುಖವಾಗಿ ಅಸ್ಸಾಂನಲ್ಲಿ ಶಾಂತಿ ನೆಲೆಸುವ ಆರಂಭಿಕ ಸೂಚನೆಯಾಗಿದೆ. ಪ್ರತ್ಯೇಕತಾವಾದಿಗಳ ಗುಂಪಿನ ಉಪಟಳದಿಂದ ಅಸ್ಸಾಂನಲ್ಲಿ 1979ರಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಜ್ಯವು ಕೂಡ ಹಿಂಸೆಯಿಂದ ಬಳಲುತ್ತಿತ್ತು” ಎಂದು ಅಮಿತ್ ಶಾ ತಿಳಿಸಿದ್ದಾರೆ.

‘ಉಲ್ಫಾ’ ಸಂಘಟನೆಯನ್ನು ಭಾರತದ ಭಯೋತ್ಪಾದಕ ಸಂಘಟನೆಯಂದು ನಿರ್ಧರಿಸಿ 1990ರಲ್ಲಿ ನಿಷೇಧಿಸಲಾಗಿತ್ತು. 2011ರಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸುವ ತ್ರಿಪಕ್ಷೀಯ ಒಪ್ಪಂದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ‘ಉಲ್ಫಾ’ ಸಹಿ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X