ಲೇಡಿ ಸಿಂಘಂ ಖ್ಯಾತಿಯ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಸಾವು

Date:

Advertisements

ಅಸ್ಸಾಂನಲ್ಲಿ ‘ಲೇಡಿ ಸಿಂಘಂ’ ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

30 ವರ್ಷ ವಯಸ್ಸಿನ ಜುನ್ಮೋನಿ ರಾಭಾ ಅವರು ನಾಗೂನ್‌ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಜುನ್ಮೋನಿ ರಾಭಾ ಅವರು ಒಬ್ಬರೇ ಇದ್ದರು ಎನ್ನಲಾಗಿದ್ದು, ವಾಹನದಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜುನ್ಮೋನಿ ರಾಭಾ ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾದಗಳಿಂದಾಗಿ ಅವರು ಹಲವು ಸಲ ಅಮಾನತುಗೊಂಡಿದ್ದರು. ಹಲವು ಕಷ್ಟಕರ ಪ್ರಕರಣಗಳನ್ನು ಧೈರ್ಯವಾಗಿ ಎದುರಿಸಿದ್ದ ಅವರು, ಉದ್ಯೋಗದ ಹೆಸರಿನಲ್ಲಿ ವಂಚಿಸಿದ್ದ ಸ್ವತಃ ಭಾವಿ ಪತಿಯನ್ನು ಬಂಧಿಸಿ ಜನಮೆಚ್ಚುಗೆ ಪಡೆದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ಅಸ್ಸಾಂ ಪೊಲೀಸ್‌ ಅಧಿಕಾರಿಗಳು ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ. ಜುನ್ಮೋನಿ ರಾಭಾ ಅವರು ಬಾಲಿವುಡ್ ಸಿನಿಮಾಗಳ ನಂತರ ಲೇಡಿ ಸಿಂಘಂ, ದಬಾಂಗ್ ಕಾಪ್ ಎಂದು ಜನಪ್ರಿಯತೆ ಗಳಿಸಿದ್ದರು.

ನಾಗಾವ್ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಗುವಾಹಟಿಯಲ್ಲಿ ಜುನ್ಮೋನಿ ರಾಭಾ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆಕೆಯ ಕುಟುಂಬವು ಅಪಘಾತದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದೆ.

ಕಂಟೈನರ್ ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಉತ್ತರ ಪ್ರದೇಶದ ನೋಂದಣಿ ಸಂಖ್ಯೆಯನ್ನು ಹೊಂದಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X