ಸಿಜೆಐ ಗವಾಯಿ ಹಲ್ಲೆಗೆ ಯತ್ನ; ಬರಗೂರು ಖಂಡನೆ

Date:

Advertisements

ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ನಾನು ವೈಯಕ್ತಿಕವಾಗಿ ಮತ್ತು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಪರವಾಗಿ ಖಂಡಿಸುತ್ತೇನೆ.

ಹಿರಿಯ ವಕೀಲರೊಬ್ಬರು ಹೀಗೆ ಮುಖ್ಯನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣವು ವೈಯಕ್ತಿಕ ಅಸಹನೆ ಮಾತ್ರವಾಗಿರದೆ, ದೇಶದಲ್ಲಿ ಆವರಿಸಿಕೊಳ್ಳುತ್ತಿರುವ ಅಮಾನವೀಯ ಧಾರ್ಮಿಕ ಮೂಲಭೂತವಾದದ ಒಂದು ಸಂಕೇತವಾಗಿದೆ. ಧರ್ಮದ ಹೆಸರಿನಲ್ಲಿ ನೈಜ ಧಾರ್ಮಿಕತೆಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಯಾರೇ ಮಾಡಿದರೂ ಖಂಡಿಸಬೇಕು. ಅದರಲ್ಲೂ ಸಂವಿಧಾನದ ಆಶಯಗಳಿಗೆ ನಿಷ್ಠರಾಗಲೇಬೇಕಾದ ವಕೀಲರು ನ್ಯಾಯಾಲಯದ ಕಾರ್ಯ ಕಲಾಪದ ಸಂದರ್ಭವನ್ನೇ ಆಯ್ಕೆ ಮಾಡಿಕೊಂಡು ಶೂ ಎಸೆದದ್ದು ಮನುವಾದಿ ವಿಕೃತಿಯ ಪ್ರತೀಕವಾಗಿದೆ. ಸೌಹಾರ್ದತೆ ಮತ್ತು ಸಮಾನತೆಗಳ ಪರಂಪರೆಯುಳ್ಳ ಭಾರತದಲ್ಲಿ ಇಂತಹ ದ್ವೇಷ ಮತ್ತು ಅಸಹಿಷ್ಣುತೆಯ ಕೃತ್ಯಗಳು ನಡೆಯುವುದು ಧಾರ್ಮಿಕವೂ ಅಲ್ಲ, ನೈತಿಕವೂ ಅಲ್ಲ, ಕಾನೂನಾತ್ಮಕವೂ ಅಲ್ಲ. ಆದ್ದರಿಂದ ಇಂತಹ ಕೃತ್ಯಗಳನ್ನು ನಿರ್ದಿಷ್ಟ ಧರ್ಮ, ಪಕ್ಷ, ಪಂಥಗಳನ್ನು ಮೀರಿ ಮಾನವೀಯವಾದವರೆಲ್ಲರೂ ಖಂಡಿಸಬೇಕು; ಶಿಕ್ಷೆಯಾಗಬೇಕು.

ಈ ಕೃತ್ಯ ನಡೆದಾಗ ವಿಚಲಿತರಾಗದೆ ಕಾರ್ಯಕಲಾಪಗಳನ್ನು ಮುಂದುವರೆಸುವ ಮೂಲಕ ಮುತ್ಸದ್ಧಿತನವನ್ನು ತೋರಿದ ಮುಖ್ಯ ನ್ಯಾಯಾಮೂರ್ತಿ ಬಿ ಆರ್ ಗವಾಯಿಯವರ ನಡೆ ಅಭಿನಂದನೀಯವಾದುದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ದೇವಸ್ವಂ ಅಧಿಕಾರಿ ಅಮಾನತು

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ...

ನಿಗಮ-ಮಂಡಳಿ-ಪ್ರಾಧಿಕಾರ ಅಧ್ಯಕ್ಷ ಸ್ಥಾನ | ಬೆಂಗಳೂರಿಗೆ 12, ಮಂಗಳೂರಿಗೆ 5, 11 ಜಿಲ್ಲೆಗೆ ಪ್ರಾತಿನಿಧ್ಯವೇ ಇಲ್ಲ!

ನಿಗಮ-ಮಂಡಳಿ-ಪ್ರಾಧಿಕಾರ ಅಧ್ಯಕ್ಷ ಸ್ಥಾನ ವಿಚಾರವಾಗಿ ಪಕ್ಷದ ಕಚೇರಿಗಿಂತಲೂ ನಾಯಕರ ಮನೆ ಸುತ್ತಿರುವ...

ರಾಜಸ್ಥಾನ ಸರ್ಕಾರಿ ಕಟ್ಟಡಗಳಿಗೆ ಏನಾಗುತ್ತಿದೆ?: ಕೆಲವು ಕುಸಿಯುತ್ತಿವೆ – ಕೆಲವಕ್ಕೆ ಬೆಂಕಿ ಬೀಳುತ್ತಿದೆ

ರಾಜಸ್ಥಾನದಲ್ಲಿ ಕೆಲವು ಸರ್ಕಾರಿ ಕಟ್ಟಡಗಳು ಕುಸಿದು ಬೀಳುತ್ತಿವೆ. ಇನ್ನೂ ಕೆಲ ಕಟ್ಟಡಗಳಿಗೆ...

ಉತ್ತರ ಪ್ರದೇಶ | ಮುಸ್ಲಿಂ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯೆ

ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ವೈದ್ಯೆ ಚಿಕಿತ್ಸೆ ನಿರಾಕರಿಸಿದ ಆಘಾತಕಾರಿ ಘಟನೆ...

Download Eedina App Android / iOS

X