ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಯತ್ನ; ಕಾಮುಕ ವೈದ್ಯನ ಖಾಸಗಿ ಅಂಗ ಕತ್ತರಿಸಿದ ನರ್ಸ್​

Date:

Advertisements

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ವರದಿಯಾಗುತ್ತಿವೆ. ಅತ್ಯಾಚಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿವೆ. ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ವಿರುದ್ಧ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಆಸ್ಪತ್ರೆಯೊಂದರಲ್ಲಿ ವೈದ್ಯರು ನರ್ಸ್‌ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದು, ಸಂತ್ರಸ್ತ ನರ್ಸ್‌ ಕಾಮುಕ ವೈದ್ಯನೊಬ್ಬನ ಖಾಸಗಿ ಅಂಗವನ್ನು ಕತ್ತರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಸಮಷ್ಟಿಪುರ ಜಿಲ್ಲೆಯ ಗಂಗಾಪುರದಲ್ಲಿರುವ ಖಾಸಗಿ ಆಸ್ಪತ್ರೆ ‘ಆರ್​ಬಿಎಸ್ ಹೆಲ್ತ್​ ಕೇರ್​ ಸೆಂಟರ್’​ನಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ರಾತ್ರಿ ಕೆಲಸ ಮುಗಿಸಿ, ಮನೆಗೆ ಹೊರಡುತ್ತಿದ್ದ ನರ್ಸ್‌ ಮೇಲೆ ಕಾಮುಕ ವೈದ್ಯ ಸಂಜಯ್ ಕುಮಾರ್, ಆಸ್ಪತ್ರೆಯ ನಿರ್ವಾಹಕ ಸುನಿಲ್ ಕುಮಾರ್ ಗುಪ್ತಾ ಹಾಗೂ ಮತ್ತೋರ್ವ ಸಿಬ್ಬಂದಿ ಅವಧೇಶ ಕುಮಾರ್ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಕಾಮುಕರಿಂದ ತಪ್ಪಿಸಿಕೊಳ್ಳಲು ಸಂತ್ರಸ್ತ ನರ್ಸ್‌, ವೈದ್ಯನ ಖಾಸಗಿ ಅಂಗವನ್ನು ಬ್ಲೇಡ್​ನಿಂದ ಕೊಯ್ದಿದ್ದಾರೆ.

ಬಳಿಕ, ಕಾಮುಕರಿಂದ ತಪ್ಪಿಸಿಕೊಂಡು ಮುಸ್ರಿಘರಾರಿ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ.

Advertisements

ನರ್ಸ್​ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮೊದಲು ಮೂವರೂ ಕಾಮುಕರು ಆಸ್ಪತ್ರೆಯ ಬಾಗಿಲನ್ನು ಒಳಗಿನಿಂದ ಲಾಕ್‌ ಮಾಡಿದ್ದರು. ಮಾತ್ರವಲ್ಲದೆ, ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮುಕರಿಂದ ತಪ್ಪಿಸಿಕೊಳ್ಳಲು ನರ್ಸ್​ ತೋರಿದ ಧೈರ್ಯ ಶ್ಲಾಘನೀಯ. ವೈದ್ಯನ ಖಾಸಗಿ ಅಂಗವನ್ನು ಕತ್ತರಿಸಿದ ಬ್ಲೇಡ್ ಹಾಗೂ ಅತ್ಯಾಚಾರಕ್ಕೆ ಯತ್ನಕ್ಕೂ ಮುನ್ನ ಮೂವರೂ ಆರೋಪಿಗಳು ಮದ್ಯ ಸೇವಿಸಿದ್ದ ಬಾಟಲಿ ಹಾಗೂ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಅದಾಗ್ಯೂ, ಮದ್ಯಪಾನ ಮಾಡಿರುವ ಆರೋಪಿಗಳ ವಿರುದ್ಧ ಮದ್ಯಪಾನ ನಿಷೇಧ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X