ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಕಂಪ

Date:

ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

- Advertisement -

ಮುಂಜಾನೆ 1.49ರ ಸಮಯದಲ್ಲಿ ಪಶ್ಚಿಮ ಕಮೆಂಗ್ ಭಾಗದಲ್ಲಿ 3.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರವು ಅಕ್ಷಾಂಶ 27.38 ಮತ್ತು ರೇಖಾಂಶ 92.77ರಲ್ಲಿ 10 ಕಿಲೋ ಮೀಟರ್ ಆಳದಲ್ಲಿದೆ. ಇದು ಸಂಭವಿಸಿದ ಎರಡು ಗಂಟೆಗಳ ಬಳಿಕ ಮತ್ತೆ ಭೂಕಂಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಬೆಳಗಿನ ಜಾವ 3.40ಕ್ಕೆ ಪೂರ್ವ ಕಮೆಂಗ್ ಪ್ರದೇಶದಲ್ಲಿ 3.4ರಷ್ಟು ತೀವ್ರತೆಯ ಭೂಕಂಪವಾಗಿದೆ. ಅಕ್ಷಾಂಶ 27.46 ಮತ್ತು ರೇಖಾಂಶ 92.82ರಲ್ಲಿ 5 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಎಕ್ಸ್‌ (ಟ್ವೀಟ್) ಮಾಡಿದೆ.

ಮಹಾರಾಷ್ಟ್ರದ ಹಿಂಗೋಲಿ ಪ್ರದೇಶದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಂಕಪನ ಸಂಭವಿಸಿದೆ. ಗುರುವಾರ ಮುಂಜಾನೆ 6.08ರ ಸಮಯಕ್ಕೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 4.5ರಷ್ಟು ತೀವ್ರತೆ ಕಂಡುಬಂದಿದೆ. ಇದಾದ ಹತ್ತು ನಿಮಿಷಗಳಲ್ಲೇ 6.19ರ ಹೊತ್ತಿಗೆ ಮತ್ತೆ ಭೂಮಿ ಕಂಪಿಸಿದ್ದು, 3.6ರಷ್ಟು ತೀವ್ರತೆ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಮಿ ಕಂಪಿಸಿದರೂ ಯಾವುದೇ ಪ್ರಾಣ ಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...