ಉತ್ತರ ಪ್ರದೇಶ | ಮಹಿಳೆಯ ಮೇಲೆ ಅತ್ಯಾಚಾರ; ಬಜರಂಗದಳ ನಾಯಕ ಬಂಧನ

Date:

Advertisements

ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಜರಂಗದಳದ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂಘಪರಿವಾರದ ನಾಯಕನನ್ನು ದಿಲೀಪ್ ಸಿಂಗ್ ಬಜರಂಗಿ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಹೆಚ್ಚುವರಿ ಡಿಸಿಪಿ ಮಹೇಶ್ ಕುಮಾರ್, “ತನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿ ಗೋವಿಂದ ನಗರ ಪೊಲೀಸ್ ಠಾಣೆಯ ಹೊರಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬಜರಂಗಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಐವರ ಕೊಲೆ ಪ್ರಕರಣ: ನೆರೆಹೊರೆಯವರ ಕಿರುಕುಳ ಕಾರಣಕ್ಕೆ ತನ್ನ ಸೋದರಿಯರನ್ನೇ ಕೊಂದನೆ?

Advertisements

2024ರ ನವೆಂಬರ್ 5ರಂದು ಮಹಿಳೆ ಬಜರಂಗಿ ವಿರುದ್ಧ ಕಲೆಕ್ಟರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. “ವಿವಾಹವಾಗುವುದಾಗಿ ಮನವೊಲಿಸಿ ನನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ನನ್ನ ಕೆಟ್ಟ ಚಿತ್ರ, ವಿಡಿಯೋಗಳನ್ನು ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ” ಎಂದು ಮಹಿಳೆ ದೂರು ನೀಡಿದ್ದಾರೆ.

ಈ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಲು ಆರಂಭಿಸಿದ ಬಳಿಕ ಬಜರಂಗದಳದ ಕಾನ್ಪುರದ ಮಾಜಿ ಸಂಚಾಲಕ ಆಗಿದ್ದ ಬಜರಂಗಿ ಮಾತ್ರ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಸೋಮವಾರ ಬಜರಂಗಿ ಮತ್ತು ಆತನ ಬೆಂಬಲಿಗರು ಗೋವಿಂದ್ ನಗರ ಪೊಲೀಸ್ ಠಾಣೆ ಹೊರಗೆ ಸೇರಿ ಪ್ರತಿಭಟಿಸಿದ್ದಾರೆ. ಬಜರಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಬೆನ್ನಲ್ಲೇ ಪೊಲೀಸರು ಬಜರಂಗಿಯನ್ನು ಬಂಧಿಸಿದ್ದಾರೆ. ಈಗಾಗಲೇ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪ್ರಕರಣ ಹೊಂದಿರುವ ಬಜರಂಗಿ ಮೇಲೆ ಇನ್ನೆರಡು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಧಕ್ಕೆ ತಂದ ಆರೋಪ ಮತ್ತು ಆತ್ಮಹತ್ಯೆ ಯತ್ನದ ದೂರು ದಾಖಲಿಸಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X