ಬಾಂಗ್ಲಾ ದಂಗೆ | ವಿದ್ಯಾರ್ಥಿಗಳನ್ನು ಭಾವನಾತ್ಮಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿತ್ತು: ಶೇಖ್ ಹಸೀನಾ ಆರೋಪ

Date:

ಬಾಂಗ್ಲಾದೇಶದಲ್ಲಿ ನಡೆದ ಭಾರಿ ಜನಾಕ್ರೋಶ ಹಾಗೂ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ಅಧಿಕಾರ ಕಳೆದುಕೊಂಡು ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ, ತಮ್ಮ ಆಡಳಿತದ ಪತನಕ್ಕೆ ಕಾರಣವಾದ ಪ್ರತಿಭಟನೆಯ ಕುರಿತು ಮೌನ ಮುರಿದಿದ್ದಾರೆ. ವಿದ್ಯಾರ್ಥಿಗಳನ್ನು ಭಾವನಾತ್ಮಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ನವದೆಹಲಿಯ ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ (FCC South Asia) ಆಯೋಜಿಸಿದ್ದ ವರ್ಚುವಲ್ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಶೇಖ್ ಹಸೀನಾ ಅವರು, 2024ರ ಜುಲೈ-ಆಗಸ್ಟ್‌ನಲ್ಲಿ ನಡೆದ ಅಶಾಂತಿ ಶಾಂತಿಯುತ ವಿದ್ಯಾರ್ಥಿ ಚಳವಳಿಯಾಗಿರಲಿಲ್ಲ, ಬದಲಿಗೆ ಯೋಜಿತ ರಾಜಕೀಯ ಗಲಭೆಯಾಗಿತ್ತು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರ ಕೋರಿ ಭಾರತಕ್ಕೆ ಬಾಂಗ್ಲಾ ಪತ್ರ

ಮೀಸಲಾತಿ ಹೋರಾಟದಲ್ಲಿದ್ದ ನಿಜವಾದ ವಿದ್ಯಾರ್ಥಿಗಳನ್ನು ಕೆಲವು ಸಂಘಟಿತ ಹಿತಾಸಕ್ತಿ ಗುಂಪುಗಳು ಭಾವನಾತ್ಮಕವಾಗಿ ದುರ್ಬಳಕೆ ಮಾಡಿಕೊಂಡವು. ವಿದ್ಯಾರ್ಥಿಗಳ ಮುಗ್ಧತೆಯನ್ನು ಅಸ್ತ್ರವಾಗಿಸಿಕೊಂಡು, ಆಡಳಿತ ಬದಲಾವಣೆಯ ಹಿಂಸಾತ್ಮಕ ರಾಜಕೀಯ ಉದ್ದೇಶ ಸಾಧನೆಗೆ ಅವರ ಪ್ರತಿಭಟನೆಯನ್ನು ಬಳಸಿಕೊಳ್ಳಲಾಯಿತು ಎಂದು ಹಸೀನಾ ಆರೋಪಿಸಿದ್ದಾರೆ.

ತಮ್ಮ ಸರ್ಕಾರವು ಮೀಸಲಾತಿ ವಿಚಾರವನ್ನು ಮಾತುಕತೆ, ಕಾನೂನು ಪ್ರಕ್ರಿಯೆ ಮತ್ತು ತಾಳ್ಮೆಯಿಂದ ಬಗೆಹರಿಸಲು ಶ್ರಮಿಸಿತ್ತು ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಹಸೀನಾ ಅವರ ಈ ವರ್ಚುವಲ್ ಮಾಧ್ಯಮ ಕಾರ್ಯಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತದ ನೆಲವನ್ನು ಯಾವುದೇ ನೆರೆಹೊರೆಯ ಸಾರ್ವಭೌಮ ದೇಶದ ವಿರುದ್ಧ ರಾಜಕೀಯ ಚಟುವಟಿಕೆಗೆ ಬಳಸಲು ಅವಕಾಶ ನೀಡುವುದಿಲ್ಲ ಎಂಬ ನೀತಿಯನ್ನು ಭಾರತ ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...