ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

Date:

Advertisements

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಢಾಕಾ ಪೊಲೀಸರ ತಂಡ (ಢಾಕಾ ಮೆಟ್ರೋಪಾಲಿಟನ್ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್) ಭಾರತಕ್ಕೆ ಭೇಟಿ ನೀಡಲಿದೆ.

ಭಾರತೀಯ ಪೊಲೀಸರ ನಾಲ್ಕು ಸದಸ್ಯರ ತಂಡವು ಪ್ರಸ್ತುತ ಕೊಲೆ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಕೋಲ್ಕತ್ತಾದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಮೇ 12ರಂದು ಢಾಕಾದಿಂದ ಹೊರಟ ಅನ್ವರುಲ್ ಅಜೀಮ್ ಬಳಿಕ ನಾಪತ್ತೆಯಾಗಿದ್ದರು.

ಇದನ್ನು ಓದಿದ್ದೀರಾ?  ಬಾಂಗ್ಲಾದೇಶದ ಸಂಸದನ ಹತ್ಯೆಗೆ 5 ಕೋಟಿ ರೂ. ಸುಪಾರಿ: ಪ್ರಕರಣ ಭೇದಿಸಿದ ಪೊಲೀಸರು

Advertisements

ಅನ್ವರುಲ್ ಅಜೀಮ್ ಬಾಂಗ್ಲಾದೇಶದ ಜೆನೈದಾ-4 ವಿಭಾಗದಿಂದ ಮೂರು ಬಾರಿ ಸಂಸದರಾಗಿರುವ ಅವಾಮಿ ಲೀಗ್‌ನ ಕಲಿಗಂಜ್ ಉಪ-ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿದ್ದಾರೆ.

ಉತ್ತರ ಕೋಲ್ಕತ್ತಾದ ಬಾರಾನಗರದ ನಿವಾಸಿ ಮತ್ತು ಬಾಂಗ್ಲಾದೇಶದ ರಾಜಕಾರಣಿಯ ಪರಿಚಯಸ್ಥ ಗೋಪಾಲ್ ಬಿಸ್ವಾಸ್ ಮೇ 18ರಂದು ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಅನ್ವರುಲ್ ಅಜೀಮ್ ಹುಡುಕಾಟ ಆರಂಭಿಸಲಾಗಿತ್ತು.

ಇದನ್ನು ಓದಿದ್ದೀರಾ?  8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

ಕೋಲ್ಕತ್ತಾ ಪೊಲೀಸರ ಪ್ರಕಾರ, ಬಾಂಗ್ಲಾದೇಶಿ ಸಂಸದರ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಿವಿಧ ಪ್ರದೇಶಗಳಲ್ಲಿ ಎಸೆಯಲಾಗಿದೆ ಎಂಬುವುದು ಸಾಂದರ್ಭಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ. ಆದರೆ ದೇಹ ಅಥವಾ ದೇಹದ ಭಾಗಗಳ ಕುರುಹುಗಳು ಇನ್ನೂ ಪತ್ತೆಯಾಗಿಲ್ಲ.

ಅನಾರ್ ಕ್ರೂರ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಾಂಗ್ಲಾದೇಶದ ನ್ಯಾಯಾಲಯವು ಶುಕ್ರವಾರ ಮೂವರು ಶಂಕಿತರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಪಶ್ಚಿಮ ಬಂಗಾಳ ಪೊಲೀಸರು ಈ ಕೊಲೆಯಲ್ಲಿ ನಂಟು ಹೊಂದಿದ್ದ ಬಾಂಗ್ಲಾದೇಶಿಯನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X