ಮುಂದಿನ ವಾರ ನಾಲ್ಕು ದಿನ ಬ್ಯಾಂಕ್ ರಜೆ: ಇಲ್ಲಿದೆ ಸಂಪೂರ್ಣ ಪಟ್ಟಿ

Date:

Advertisements

ಮುಂದಿನ ವಾರ ಕರ್ನಾಟಕ ಸೇರಿ ದೇಶದ ಕೆಲವು ರಾಜ್ಯಗಳಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ. ದೀಪಾವಳಿ, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬ್ಯಾಂಕ್ ರಜೆ ಇರಲಿದೆ. ದೀಪಾವಳಿ ಬ್ಯಾಂಕ್ ರಜೆಗಳು ರಾಜ್ಯದ ಮೇಲೆ ಅವಲಂಬಿಸಿರುತ್ತದೆ. ಕೆಲವು ರಾಜ್ಯಗಳಲ್ಲಿ ನಾಲ್ಕು ದಿನ ರಜೆ ಇದ್ದರೆ, ಇನ್ನು ಕೆಲವು ರಾಜ್ಯಗಳಲ್ಲಿ ಮೂರು ದಿನ ಬ್ಯಾಂಕ್ ಬಂದ್ ಆಗಿರುತ್ತದೆ.

ಅಕ್ಟೋಬರ್ 31ರಂದು ದೀಪಾವಳಿ ಹಿನ್ನೆಲೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಗೋವಾ, ಪುದುಚೇರಿ, ತೆಲಂಗಾಣ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬ್ಯಾಂಕ್‌ಗಳಿಗೆ ರಜೆ ಇರಲಿದೆ.

ಅದರ ಮರುದಿನ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕರ್ನಾಟಕದಲ್ಲಿ ಬ್ಯಾಂಕ್ ಬಂದ್ ಆಗಿರಲಿದೆ. ಉಳಿದಂತೆ ದೀಪಾವಳಿ, ಕತ್ ಹಬ್ಬದ ಹಿನ್ನೆಲೆ ತ್ರಿಪುರಾ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮೇಘಾಲಯ, ಸಿಕ್ಕಿಂ, ಮಣಿಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.

ಇದನ್ನು ಓದಿದ್ದೀರಾ? ಜುಲೈನಲ್ಲಿ ಬ್ಯಾಂಕ್‌ಗಳಿಗೆ 12 ದಿನ ರಜೆ; ಪೂರ್ಣ ಪಟ್ಟಿ ಇಲ್ಲಿದೆ!

ನವೆಂಬರ್ 2ರಂದು ಬಲಿ ಪಾಡ್ಯಮಿ/ ಲಕ್ಷ್ಮೀ ಪೂಜೆ/ ವಿಕ್ರಮ್ ಸಮ್ವಂತ್ ಹೊಸ ವರ್ಷ ದಿನದ ಕಾರಣ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಸಿಕ್ಕಿಂ, ಉತ್ತರಾಖಂಡ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ. ಅದಾದ ಬಳಿಕ ನವೆಂಬರ್ 3ರಂದು ಭಾನುವಾರವಾಗಿದ್ದು, ವಾರದ ರಜೆ ಇರಲಿದೆ.

ಈ ಪೈಕಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ಅಕ್ಟೋಬರ್ 31ರಿಂದ ನವೆಂಬರ್ 3ರವರೆಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ ಇರಲಿದೆ. ಇನ್ನು ಉತ್ತರಾಖಂಡ, ಸಿಕ್ಕಿಂನಲ್ಲಿ ನವೆಂಬರ್ 1ರಿಂದ ನವೆಂಬರ್ 3ರವರೆಗೆ ಮೂರು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

Download Eedina App Android / iOS

X