ಆರ್ಥಿಕ ಸಮೀಕ್ಷೆ ಕುರಿತ ಹೇಳಿಕೆ: ರಾಹುಲ್ ಗಾಂಧಿಗೆ ನ್ಯಾಯಾಲಯದ ಸಮನ್ಸ್

Date:

ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್ಥಿಕ ಸಮೀಕ್ಷೆ ಕುರಿತು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಜನವರಿ 7ರೊಳಗೆ ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವೊಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.

- Advertisement -

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಂಘದ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಮನ್ಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಮೊದಲಿಗೆ ಆಗಸ್ಟ್‌ನಲ್ಲಿ ಪಾಠಕ್ ಶಾಸಕರು ಮತ್ತು ಸಂಸದರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ರಾಹುಲ್ ವಿರುದ್ಧ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ನಿರಾಕರಿಸಿದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ದೇಶದಲ್ಲಿ ದುರ್ಬಲ ವರ್ಗದವರೇ ಅತಿ ಹೆಚ್ಚಿನ ಪ್ರಮಾಣದಲ್ಲಿದ್ದರೂ ಅವರು ಹೊಂದಿರುವ ಆಸ್ತಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಇದು ಹೀಗೆ ಮುಂದುವರೆದರೆ ಅತಿ ಹೆಚ್ಚು ಜನಸಂಖ್ಯೆ ಇರುವ ಜನ ಹೆಚ್ಚಿನ ಆಸ್ತಿಗೆ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳುವ ಮೂಲಕ ದುರ್ಬಲ ವರ್ಗದವರಲ್ಲಿ ದ್ವೇಷ ಮತ್ತು ಶತ್ರುತ್ವದ ವಿಷ ಬೀಜ ಬಿತ್ತಲು ರಾಹುಲ್ ಗಾಂಧಿ ಯತ್ನಿಸಿದ್ದಾರೆ ಎಂದು ಪಾಠಕ್ ಪರ ವಕೀಲ ವೀರೇಂದ್ರ ಪಾಲ್ ಗುಪ್ತಾ ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಆಗಸ್ಟ್‌ನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 27 ರಂದು ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಪಾಠಕ್ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದರು.

ಹಿಂದುಳಿದ ಜಾತಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಇತರೆ ಹಿಂದುಳಿದ ಸಮುದಾಯಗಳ ಜನಸಂಖ್ಯೆ ಮತ್ತು ಸ್ಥಿತಿಯನ್ನು ನಿಖರವಾಗಿ ನಿರ್ಣಯಿಸಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಹೈದರಾಬಾದ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...