ಇಶಾನ್ ಕಿಶನ್-ಶ್ರೇಯಸ್ ಅಯ್ಯರ್‌ರನ್ನು ಹೊರಗಿಟ್ಟ ಬಿಸಿಸಿಐ; ‘ಅವರ ಮನಸ್ಸಿನಲ್ಲಿ ಏನಿದೆ?’ ಎಂದ ಹರ್ಭಜನ್

Date:

Advertisements

ಭಾರತದ ಅಪೆಕ್ಸ್ ಕ್ರಿಕೆಟ್ ಬೋರ್ಡ್ ಪ್ರಕಟಿಸಿದ ಆಟಗಾರರ ಪಟ್ಟಿಯಲ್ಲಿ ಶೇಯಸ್‌ ಅಯ್ಯರ್ ಮತ್ತು ಇಶಾನ್ ಕಿಶನ್‌ರನ್ನು ಕೈಬಿಟ್ಟಿರುವ ಬಿಸಿಸಿಐ ವಿರುದ್ಧ ಭಾರತ ತಂಡದ ಮಾಜಿ ಸ್ಪನ್ನರ್ ಹರ್ಭಜನ್ ಸಿಂಗ್‌ ಬೇಸರ ವ್ಯಕ್ತಪಡಿಸಿದ್ದಾರೆ. ಅವರನ್ನು ಹೊರಗಿಟ್ಟಿರುವುದು ಕ್ರಿಕೆಟ್‌ ಹಾದಿಯ ಅಂತ್ಯವೇನಲ್ಲ. ಮುಂದಿನ ಕ್ರಿಕೆಟ್‌ ಸರಣಿಗಳಲ್ಲಿ ತಂಡಕ್ಕೆ ಅವರ ಅವಶ್ಯಕತೆ ಇದ್ದೇ ಇರುತ್ತದೆ ಎಂದು ಹರ್ಭಜನ್ ಹೇಳಿದ್ದಾರೆ.

“ಪ್ರತಿ ಆಟಗಾರರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ, ಯಾರು ಆಯ್ಕೆಯಾಗುತ್ತಾರೆ ಎಂಬುದು ವಿಭಿನ್ನ ಅಂಶವಾಗಿದೆ. ಆಯ್ಕೆಯು ಅವರ ಫಾರ್ಮ್ ಮತ್ತು ತಂಡಕ್ಕೆ ಅವರ ಅಗತ್ಯವಿದೆಯೇ ಎಂಬುದನ್ನು ಅವಲಂಬಿಸಿರುತ್ತದೆ. ಅಪೆಕ್ಸ್ ಕ್ರಿಕೆಟ್ ಬೋರ್ಟ್‌ನಲ್ಲಿ ಅವರು ಸ್ಥಾನ ಪಡೆಯದೇ ಇರುವುದರ ಅರ್ಥ, ಅವರ ಹಾದಿಯ ಅಂತ್ಯವೆಂದಲ್ಲ” ಎಂದು ಹರ್ಭಜನ್ ವಿವರಿಸಿದ್ದಾರೆ.

“ಅವರನ್ನು ಹೊರಗಿಟ್ಟಿರುವುದು ಅವರಿಗೆ ಕಲಿಕೆಗೆ ಸಮಯ ನೀಡುತ್ತದೆ. ನಾನು ಇದನ್ನು ರಚನಾತ್ಮಕ ರೀತಿಯಲ್ಲಿ ನೋಡುತ್ತೇನೆ. ಇಲ್ಲಿಂದ ಅವರು ಉತ್ತಮ ಆಟಗಾರರಾಗಿ ಹೊರಹೊಮ್ಮಬಹುದೆಂದು ನಾನು ಭಾವಿಸುತ್ತೇನೆ. ಆದರೆ, ನಾವು ಇನ್ನೂ ಅವರ ಮನಸ್ಸಿನಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿಯಲಾಗಿಲ್ಲ. ಇಬ್ಬರೂ ಅದ್ಭುತ ಕ್ರಿಕೆಟಿಗರು. ಭವಿಷ್ಯದಲ್ಲಿ ಅವರು ಭಾರತಕ್ಕಾಗಿ ಸಾಕಷ್ಟು ಪಂದ್ಯಗಳನ್ನು ಗೆಲ್ಲುತ್ತಾರೆ” ಎಂದು ಹರ್ಭಜನ್ ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X