ಕಡಿದ ಪತ್ನಿಯ ತಲೆಯೊಂದಿಗೆ ಉದ್ಯಾನದಲ್ಲಿ ನೃತ್ಯವಾಡಿದ ಯುವಕ

Date:

Advertisements

35 ವರ್ಷದ ಯುವಕನೊಬ್ಬ ತನ್ನ ಪತ್ನಿಯ ತಲೆ ಕಡಿದು ಆ ತಲೆ ಹಿಡಿದುಕೊಂಡು ಉದ್ಯಾನವನದಲ್ಲಿ ನೃತ್ಯ ಮಾಡಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳ ಪುರ್ಬಾ ಮರದಿನಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗೌತಮ್ ಗುಚ್ಚಾಯಿತ್ ಎಂದು ಗುರುತಿಸಲಾಗಿದ್ದು, ಪಶ್ಚಿಮ ಬಂಗಾಳದ ಪುರ್ಬಾ ಮರದಿನಾಪುರ ಜಿಲ್ಲೆಯ ಚಿಸ್ತಿಪುರ ಗ್ರಾಮದ ನಿವಾಸಿಯಾಗಿದ್ದಾನೆ. ಇದೇ ವ್ಯಕ್ತಿ 2021ರಲ್ಲಿ ಕೋಲ್ಕೊತಾದ ಅಲಿಪೊರೆ ಉದ್ಯಾನದಲ್ಲಿ ಸಿಂಹದ ಗುಹೆಯೊಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದ.

ಪೊಲೀಸರ ವರದಿಯ ಪ್ರಕಾರ ಆರೋಪಿ ಗುಚ್ಚಾಯಿತ್ ಪತ್ನಿಯ ತಲೆ ಕಡಿದು ಆ ತಲೆಯೊಂದಿಗೆ ಉದ್ಯಾನದಲ್ಲಿ ನೃತ್ಯ ಮಾಡಿ ಕುರ್ಚಿಯ ಮೇಲೆ ಕುಳಿತ್ತಿದ್ದ.

Advertisements

ಆರೋಪಿಯು ಉದ್ಯಾನದ ಕುರ್ಚಿಯ ಮೇಲೆ ಸುಮಾರು 30 ನಿಮಿಷಗಳ ಕಾಲ ಕುಳಿತ್ತಿದ್ದ. ಸ್ಥಳೀಯರು ಆತನನ್ನು ಹಿಡಿಯಲು ಭಯಗೊಂಡು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರಕ್ಷಕರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಪೊಲೀಸರ ಹೇಳಿಕೆ ಪ್ರಕಾರ ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಪೊಲೀಸರು ಆರೋಪಿಯ ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಪ್ಪಿಸಿದ್ದಾರೆ.

“ಘಟನೆ ನಡೆದ ನಂತರ ಆರೋಪಿ ಗುಚ್ಚಾಯಿತ್‌ನನ್ನು ಬಂಧಿಸಲಾಯಿತು.ತಲೆ ಹಾಗೂ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.ವಿವಾರಾತ್ಮಕ ತನಿಖೆಯ ನಂತರ ಕೊಲೆಯ ಉದ್ದೇಶ ಏನೆಂಬುದು ಗೊತ್ತಾಗಲಿದೆ. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಜಗಳದಿಂದ ಕೊಲೆ ಸಂಭವಿಸಿರಬಹುದು” ಎಂದು ಜಿಲ್ಲಾ ಎಸ್‌ಪಿ ಸೌಮ್ಯದೀಪ್ ಬಟ್ಟಾಚಾರ್ಯ ಹೇಳಿದ್ದಾರೆ.

ಇದೇ ವ್ಯಕ್ತಿ 2021ರಲ್ಲಿ ಕೋಲ್ಕೊತಾದ ಅಲಿಪೊರೆ ಪ್ರಾಣಿ ಉದ್ಯಾನದಲ್ಲಿ ಸಿಂಹದ ಗುಹೆಯೊಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದ. ನಂತರ ಸಣ್ಣಪುಟ್ಟ ಗಾಯಗೊಂಡಿದ ಈತನನ್ನು ಉದ್ಯಾನವನದ ಸಿಬ್ಬಂದಿ  ರಕ್ಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X