ಮಣಿಪುರದಿಂದ ಆರಂಭವಾದ ಭಾರತ್ ನ್ಯಾಯ ಯಾತ್ರೆ: 66 ದಿನಗಳ ಕಾಲ ನಡೆಯುವ ಅಭಿಯಾನ

Date:

Advertisements

ಕಳೆದ ವರ್ಷ ಭಾರತದ ದಕ್ಷಿಣದಿಂದ ಉತ್ತರಕ್ಕೆ ದೇಶಾದ್ಯಂತ ಯಶಸ್ವಿಯಾಗಿದ್ದ 4 ಸಾವಿರ ಕಿ.ಮೀ.ನ ಭಾರತ್ ಜೋಡೋ ಪಾದಯಾತ್ರೆಯ ನಂತರ ಇಂದಿನಿಂದ ಪೂರ್ವದಿಂದ ಪಶ್ಚಿಮಕ್ಕೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಲಿದೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ನೂರಾರು ನಾಯಕರು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ದೆಹಲಿಯಿಂದ ಮಣಿಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ದೀಪೆಂದರ್ ಹೂಡ, ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ಹಿಂದೆ ಸರಿಯುವುದಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಭಾರತದ ಜನರ ನ್ಯಾಯಕ್ಕಾಗಿ ಹೋರಾಟವಾಗಿದೆ ಎಂದು ಹೇಳಿದರು.

Advertisements

ಮಣಿಪುರದಿಂದ ಮುಂಬೈವರೆಗೂ 6,713 ಕಿ.ಮೀ ದೂರದವರೆಗೂ ಸಂಚರಿಸಲಿರುವ ಯಾತ್ರೆಯು 67 ದಿನಗಳ ಕಾಲ ನಡೆಯಲಿದೆ ಉತ್ತರ ಪ್ರದೇಶ, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ,ಅಸ್ಸಾಂ ಸೇರಿದಂತೆ ಒಟ್ಟು 15 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಾಗಲಿದೆ. ಮಣಿಪುರದ ಥೌಬಲ್‌ನಿಂದ ಉದ್ಘಾಟನೆಗೊಂಡು ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

‘ನ್ಯಾಯಾಕ್ಕಾಗಿ ಹೋರಾಟ’ ಎಂಬ ಘೋಷಣೆಯೊಂದಿಗೆ ಸಂಚರಿಸಲಿರುವ ಭಾರತ್ ನ್ಯಾಯ ಯಾತ್ರೆಯಲ್ಲಿ ಕಾರ್ಯಕರ್ತರು ಹಾಗೂ ನಾಗರಿಕರು ಸೇರಿದಂತೆ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ನ್ಯಾಯ ಯಾತ್ರೆಯು ಒಟ್ಟು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಮಾರ್ಚ್‌ನಲ್ಲಿ ಅಭಿಯಾನವು ಸಮಾಪ್ತಿಗೊಳ್ಳುತ್ತದೆ.

ಇಂದು(ಜನವರಿ 14) ಪೂರ್ತಿ ಮಣಿಪುರ ರಾಜ್ಯದಲ್ಲಿಯೇ ಯಾತ್ರೆ ಸಂಚರಿಸಲಿದ್ದು, 107 ಕಿ.ಮೀ ಅಂತರದೊಂದಿಗೆ 4 ಜಿಲ್ಲೆಗಳನ್ನು ಒಳಗೊಳ್ಳಲಿದೆ. ನಾಳೆ ಯಾತ್ರೆ ನಾಗಾಲ್ಯಾಂಡ್‌ಗೆ ತೆರಳಲಿದೆ.

‘ಪ್ರಧಾನಿ ಅವರು ‘ಅಮೃತ ಕಾಲ’ದ  ಬಗ್ಗೆ ಸುಳ್ಳಿನ ಕನಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ, ಹತ್ತು ವರ್ಷಗಳಲ್ಲಿ ದೇಶದಲ್ಲಿ ‘ಅನ್ಯಾಯದ ಕಾಲ’ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ಸಂದೇಶವು ಜನರಿಗೆ ತಲುಪುತ್ತದೆ ಎಂಬ ವಿಶ್ವಾಸ ನಮ್ಮದು’ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X