ಭೋಜಶಾಲಾ ವಿವಾದ: ಪಕ್ಕದ ದರ್ಗಾ ಜಾಗದಲ್ಲೇ ಶುಕ್ರವಾರದ ನಮಾಝ್‌ಗೆ ಸುಪ್ರೀಂ ಕೋರ್ಟ್ ಅನುಮತಿ

Date:

ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣದ ಪಕ್ಕದಲ್ಲೇ ಇರುವ ದರ್ಗಾ ಭೂಮಿಯಲ್ಲಿ ಶುಕ್ರವಾರದ ನಮಾಝ್ ಸಲ್ಲಿಸಲು ಸುಪ್ರೀಂ ಕೋರ್ಟ್ ಮುಸ್ಲಿಂ ಸಮುದಾಯಕ್ಕೆ ಅನುಮತಿ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಪೀಠವು ಈ ನಿರ್ದೇಶನ ನೀಡಿದೆ.

- Advertisement -

ವಿವಾದಿತ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಖಸ್ರಾ ನಂಬರ್ 596 (Khasra No 596) ರ ದರ್ಗಾ ಜಮೀನಿನಲ್ಲಿ ಪ್ರತಿ ಶುಕ್ರವಾರ ಮಧ್ಯಾಹ್ನ 1:00 ರಿಂದ 3:00 ಗಂಟೆಯ ನಡುವೆ ನಮಾಝ್ ಸಲ್ಲಿಸಲು ಅನುಮತಿ ನೀಡಲಾಗಿದೆ. ಈ ಜಾಗಕ್ಕೆ ಸ್ವತಂತ್ರ ಪ್ರವೇಶ ರಸ್ತೆ ಇರುವುದರಿಂದ ಹಾಗೂ ವಿವಾದಿತ ಕಟ್ಟಡದ ಒಳಗಡೆ ಪ್ರವೇಶಿಸುವ ಅಗತ್ಯವಿಲ್ಲದಿರುವುದರಿಂದ ಇದು ಸೂಕ್ತವಾಗಿದೆ ಎಂದು ಪೀಠ ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನೂ ಓದಿ: ಭೋಜಶಾಲೆಯನ್ನು‌ ಹಿಂದೂಗಳಿಗೆ ಒಪ್ಪಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಮುಸ್ಲಿಂ ಒಕ್ಕೂಟ

ಹಾಗೆಯೇ ಮಧ್ಯಪ್ರದೇಶ ಸರ್ಕಾರವು ನಮಾಝ್ ಸಲ್ಲಿಕೆಗೆ ಅಗತ್ಯವಾದ ಸೂಕ್ತ ಬಂದೋಬಸ್ತ್ ಮತ್ತು ವ್ಯವಸ್ಥೆಗಳನ್ನು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪ್ರಸ್ತುತ ನಿಗದಿಪಡಿಸಿದ ಸ್ಥಳ ಸೂಕ್ತವಲ್ಲವೆಂದು ಕಂಡುಬಂದಲ್ಲಿ, ಎರಡೂ ಕಡೆಯವರ ಪರಸ್ಪರ ಸಮ್ಮತಿಯೊಂದಿಗೆ ಹತ್ತಿರದ ಮತ್ತೊಂದು ಜಾಗವನ್ನು ಗುರುತಿಸಬಹುದು ಎಂದೂ ಪೀಠ ಹೇಳಿದೆ.

ಏನಿದು ಭೋಜಶಾಲಾ ವಿವಾದ?

ಭೋಜಶಾಲಾ ವಿವಾದವು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ 11ನೇ ಶತಮಾನದ ಐತಿಹಾಸಿಕ ಸ್ಮಾರಕದ ಮೇಲಿನ ಹಕ್ಕಿನ ಕುರಿತಾದ ಧಾರ್ಮಿಕ ಮತ್ತು ಕಾನೂನು ಸಂಘರ್ಷವಾಗಿದೆ. ಹಿಂದೂಗಳು ಇದನ್ನು ಸರಸ್ವತಿ ದೇವಾಲಯವೆಂದು ಪರಿಗಣಿಸಿದರೆ, ಮುಸ್ಲಿಮರು ಇದನ್ನು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ವಿವಾದಿತ ಭೋಜಶಾಲಾ ಸಂಕೀರ್ಣದ ಸಮೀಪದಲ್ಲೇ ನಮಾಝ್‌ಗೆ ಪರ್ಯಾಯ ಜಾಗ ನೀಡುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ಮಧ್ಯಂತರ ನಿರ್ದೇಶನ ನೀಡಿತ್ತು. ಆದರೆ, ಜಿಲ್ಲಾಡಳಿತವು ನಿಗದಿಪಡಿಸಿದ್ದ ಜಾಗವು ಸುಮಾರು 1.3 ಕಿಮೀ ದೂರದಲ್ಲಿದ್ದು, ಮಧ್ಯಂತರ ಆದೇಶದ ಆಶಯಕ್ಕೆ ವಿರುದ್ಧವಾಗಿದೆ ಎಂದು ಮುಸ್ಲಿಂ ಪರ ಹಿರಿಯ ವಕೀಲ ಹುಝೇಫಾ ಅಹ್ಮದಿ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದರು.

ವಿವಾದಿತ ಕಟ್ಟಡದ ಪಕ್ಕದಲ್ಲೇ ವಕ್ಫ್ ಆಸ್ತಿ ಹಾಗೂ ದರ್ಗಾ ಭೂಮಿ ಲಭ್ಯವಿದ್ದು, ಅಲ್ಲಿ ಸ್ವತಂತ್ರ ಪ್ರವೇಶ ಮಾರ್ಗವೂ ಇದೆ ಎಂದು ನಕ್ಷೆಯೊಂದಿಗೆ ಕೋರ್ಟ್‌ಗೆ ವಿವರಿಸಲಾಗಿತ್ತು. ಈ ವಾದವನ್ನು ಆಲಿಸಿದ ಪೀಠವು ದರ್ಗಾ ಜಾಗದಲ್ಲೇ ನಮಾಝ್‌ಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...