ಬೀದರ್‌ | ಸೋಯಾ ಬೆಳೆದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಲಾಭ ಸಿಗುತ್ತಿಲ್ಲ: ಸಂಸದ ಸಾಗರ್‌ ಖಂಡ್ರೆ

Date:

Advertisements

‌ಬೀದರ್‌ ಜಿಲ್ಲೆಯಲ್ಲಿ ರೈತರು ಬೆಳೆದ ಸೋಯಾಬಿನ್ ಸಂಪೂರ್ಣ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿ ಖರೀದಿಸಿ ಎಲ್ಲ ರೈತರಿಗೆ ಬೆಂಬಲ ಬೆಲೆ ಲಾಭ ಸಿಗುವಂತೆ ಕ್ರಮಕೈಗೊಳ್ಳಬೇಕೆಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಲೋಕಸಭೆಯಲ್ಲಿ ಬುಧವಾರ ಗಮನ ಸೆಳೆದ ಅವರು, ʼಬೀದರ್‌ ಕ್ಷೇತ್ರದಲ್ಲಿ ವಾರ್ಷಿಕ 20 ಲಕ್ಷ ಕ್ವಿಂಟಲ್ ಸೋಯಾಬೀನ್ ಬೆಳೆ ಬೆಳೆಯಲಾಗುತ್ತಾದರೂ ಬೆಂಬಲ ಬೆಲೆ ಅಡಿಯಲ್ಲಿ ಕೇವಲ 2 ಲಕ್ಷ ಕ್ವಿಂಟಲ್‌ಗಿಂತ ಕಡಿಮೆ ಪ್ರಮಾಣದಲ್ಲಿ ಮಾತ್ರ ಖರೀದಿ ನಡೆಯುತ್ತಿದೆʼ ಎಂದರು.

ʼಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಮುಗಿದಿರುವ ಕಾರಣಕ್ಕೆ ರೈತರಿಗೆ ಹೆಚ್ಚಿನ ಲಾಭ ಆಗಿಲ್ಲ. ಈ ಬೆಳೆ ಬೆಳೆದ ಶೇ 90ರಷ್ಟು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಲಾಭ ಸಿಕ್ಕಿಲ್ಲ. ಹೀಗಾಗಿ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಬೇಕುʼ ಎಂದು ಆಗ್ರಹಿಸಿದರು.

Advertisements

‌ʼಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಎಕರೆಗೆ ಕೇವಲ 5 ಕ್ವಿಂಟಲ್‌ನಂತೆ ಒಟ್ಟು 20 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗುತ್ತಿರುವುದರಿಂದ ಹೆಚ್ಚಿನ ರೈತರು ಬೆಂಬಲ ಬೆಲೆ ಲಾಭದಿಂದ ವಂಚಿತರಾಗುತ್ತಿದ್ದಾರೆ. ಕ್ಷೇತ್ರದ ರೈತರ ಬಾಕಿ ಉಳಿದ ‌ಸಂಪೂರ್ಣ ಸೋಯಾಬಿನ್‌ ಎಂಎಸ್‌ಪಿ ಅಡಿಯಲ್ಲಿ ಖರೀದಿಸಬೇಕು. ಇದರೊಂದಿಗೆ ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X