ಬೀದರ್‌ | ಲೋಕಸಭೆ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇರುವುದು ಸಂವಿಧಾನ ಉಲ್ಲಂಘನೆ : ಸಂಸದ ಸಾಗರ್‌ ಖಂಡ್ರೆ

Date:

ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ʼಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು. ಆದರೆ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತಳೆದಿದೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು. ಸದಸ್ಯರು ಸಾಂವಿಧಾನಿಕ ಕರ್ತವ್ಯ ನಿಭಾಯಿಸುವಂತಹ ವಾತಾವರಣ ಇರಬೇಕು, ಆದರೆ ಇತ್ತೀಚಿನ ಕೆಲವು ಪ್ರವೃತ್ತಿಗಳು ಈ ವ್ಯವಸ್ಥೆಯ ಪಾವಿತ್ರ‍್ಯತೆಗೆ ಧಕ್ಕೆಯಾಗುತ್ತಿವೆ, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ಅಪಹಾಸ್ಯ ಮಾಡುತ್ತಿವೆʼ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ʼಸದನದಲ್ಲಿ ಪ್ರತಿಪಕ್ಷದ ಸದಸ್ಯರಿಗೆ ಮಾತನಾಡಲು ಸೂಕ್ತ ಅವಕಾಶ ಕಲ್ಪಿಸದೆ ಹಕ್ಕು ಮೊಟಕುಗೊಳಿಸಲಾಗುತ್ತಿದೆ. ಇದು ಸಂಸದೀಯ ಕಲಾಪದ ಚರ್ಚೆಯ ಸ್ವರೂಪವನ್ನು ದುರ್ಬಲಗೊಳಿಸುತ್ತಿದೆʼ ಎಂದು ಸೋಮವಾರ ಪತ್ರಿಕಾ ಪ್ರಕಟಣೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ʼಪ್ರತಿಪಕ್ಷಗಳ ಸಂಸದರು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದಾಗ, ಅವರ ಮಾತುಗಳು ಕೇಳದ ರೀತಿಯಲ್ಲಿ ಮೈಕ್ರೊಫೋನ್‌ಗಳನ್ನು ಬಂದ್ ಮಾಡಲಾಗುತ್ತದೆ. ಪ್ರತಿಪಕ್ಷ ಸದಸ್ಯರ ಧ್ವನಿಯನ್ನೇ ದಮನ ಮಾಡುವ ಅಪಾಯಕಾರಿ ಪ್ರವೃತ್ತಿ ಬೆಳೆಯುತ್ತಿದೆ. ಆದರೆ ಆಡಳಿತ ಪಕ್ಷದ ಸದಸ್ಯರಿಗೆ ಮುಕ್ತ ಅವಕಾಶ ನೀಡಲಾಗುತ್ತಿದೆ. ಈ ತಾರತಮ್ಯ ಪ್ರವೃತ್ತಿ ಪ್ರಜಾಪ್ರಭುತ್ವಕ್ಕೆ ಮಾರಕʼ ಎಂದು ತಿಳಿಸಿದ್ದಾರೆ. 

ʼಬಜೆಟ್ ಮೇಲಿನ ಚರ್ಚೆಯಲ್ಲಿ ಕೆಲವು ಪ್ರಮುಖ ಸಚಿವಾಲಯಗಳನ್ನು ಹೊರಗಿಡಲಾಗುತ್ತಿದೆ, ಇದರಿಂದ ಹಣಕಾಸು ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ತೀವ್ರವಾಗಿ ಕುಗ್ಗುತ್ತಿದೆ. ತುರ್ತು ಮತ್ತು ಜನರಿಗೆ ಉಪಯುಕ್ತವಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಇರುವ ನಿಯಮ 193ನ್ನು ಸಮರ್ಪಕವಾಗಿ ಬಳಸಲು ಅವಕಾಶ ನೀಡುತ್ತಿಲ್ಲ. ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆʼ ಎಂದು ಆರೋಪಿಸಿದ್ದಾರೆ. 

ʼಸಂಸದೀಯ ಸ್ಥಾಯಿ ಸಮಿತಿಗಳ ಸ್ವಾಯತ್ತತೆಯನ್ನು ಸಹ ಕಸಿದುಕೊಳ್ಳಲಾಗುತ್ತಿದೆ ಮತ್ತು ಕೆಲವು ಸಂದರ್ಭಗಳಲ್ಲಿ ಸ್ಪೀಕರ್ ಕಚೇರಿಯಿಂದಲೇ ವರದಿಗಳ ತಿದ್ದುಪಡಿಯ ಸೂಚನೆ ನೀಡಲಾಗುತ್ತಿದೆ. ಶೂನ್ಯ ವೇಳೆಯಲ್ಲಿ ತುರ್ತು ವಿಷಯಗಳನ್ನು ಪ್ರಸ್ತಾಪಿಸಲು ಸಂಸದರಿಗೆ ನೀಡಲಾಗುತ್ತಿದ್ದ ಅವಕಾಶವನ್ನು ನಿರ್ಬಂಧಿಸಲಾಗುತ್ತಿದೆ ಇದು ಸರಕಾರದ ದಮನಕಾರಿ ಪ್ರವೃತ್ತಿʼ ಎಂದು ಆಕ್ಷೇಪಿಸಿದ್ದಾರೆ.

ʼಖಾಸಗಿ ಸದಸ್ಯರ ಮಸೂದೆಗಳು ಮತ್ತು ನಿರ್ಣಯಗಳಿಗೆ ಗಣನೀಯ ಹಿನ್ನಡೆಯಾಗುತ್ತಿದ್ದು, ಚರ್ಚೆಗಾಗಿ ಬೇಕಾದಷ್ಟು ಸಮಯ ಲಭಿಸುತ್ತಿಲ್ಲ. ಸಂಸದ್ ಟಿವಿಯಲ್ಲಿ ಪ್ರತಿಪಕ್ಷ ನಾಯಕರು ಮತ್ತು ಸದಸ್ಯರು ಮಾತನಾಡುವಾಗ ಅವರತ್ತ ಕ್ಯಾಮರಾ ಕೇಂದ್ರೀಕರಿಸದೆ, ಸಭಾಧ್ಯಕ್ಷರು ಮತ್ತು ಸದನದ ಇತರ ದೃಶ್ಯಗಳನ್ನು ತೋರಿಸಲಾಗುತ್ತದೆ ಇದು ಸರ್ವತಾ ಸಮರ್ಥನೀಯವಲ್ಲʼ ಎಂದು ಹೇಳಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು : ಬೆಲ್ದಾಳ ಶರಣರು

ʼಸಲಹಾ ಸಮಿತಿ ಸಭೆಗಳನ್ನು ನಿಯಮಿತವಾಗಿ ಕರೆಯದೆ, ನಿರ್ಲಕ್ಷಿಸಲಾಗುತ್ತಿದೆ. ಈ ಬೆಳವಣಿಗೆಳಿಂದ ನಮ್ಮ ಸಂಸದೀಯ ವ್ಯವಸ್ಥೆಯ ಮೂಲಭೂತ ತತ್ವಗಳಿಗೆ ಧಕ್ಕೆಯಾಗುತ್ತಿದ್ದು, ತಕ್ಷಣ ಸರಿಪಡಿಸುವ ಅಗತ್ಯವಿದೆ. ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಸಂವಿಧಾನದ ನಿಯಮಗಳ ಅನುಸರಣೆಯನ್ನು ಮರುಸ್ಥಾಪಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ಜನಪ್ರತಿನಿಧಿಗೂ ಸದನದಲ್ಲಿ ಧ್ವನಿ ಎತ್ತಲು ಅವಕಾಶ ನೀಡಬೇಕುʼ ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ,...