ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಬಿಹಾರದ ವ್ಯಕ್ತಿಯ ಬಂಧನ

Date:

Advertisements

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಹಾರದ ಭಾಗಲ್ಪುರ ಜಿಲ್ಲೆಯ 35 ವರ್ಷದ ಸಮೀರ್ ರಂಜನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸುಲ್ತಾನಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಹೇಶಿ ಗ್ರಾಮದಲ್ಲಿ ಗುರುವಾರ ಸಂಜೆ ಆರೋಪಿಯನ್ನು ಬಂಧಿಸಲಾಗಿದೆ. ಪ್ರಧಾನಿ ಗುರುವಾರ ಪಾಟ್ನಾಗೆ ಆಗಮಿಸಿದ್ದು, ಎರಡು ದಿನ ಬಿಹಾರದಲ್ಲಿ ಇರಲಿದ್ದಾರೆ. ಈ ಭೇಟಿ ವೇಳೆ ಪ್ರಧಾನಿಯ ಕೊಲೆ ಮಾಡಲಾಗುವುದು ಎಂದು ಭಾಗಲ್ಪುರದಿಂದ ಬೆದರಿಕೆ ವಾಟ್ಸಾಪ್ ಕರೆ ಬಂದಿತ್ತು ಬಿಹಾರ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರು ಮೃತ್ಯು; ಉನ್ನತಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

Advertisements

ಕೊಲೆ ಬೆದರಿಕೆ ಬರುತ್ತಿದ್ದಂತೆ ಭಾಗಲ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ(ಎಸ್‌ಎಸ್‌ಪಿ) ತಕ್ಷಣ ಮಾಹಿತಿ ನೀಡಲಾಗಿದೆ. ಈ ಬಗ್ಗೆ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

71 ವರ್ಷದ ಮಂಟು ಚೌಧರಿ ಅವರ ಮೊಬೈಲ್ ಫೋನ್ ಸಂಖ್ಯೆಯಿಂದ ಕರೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. “ತನಿಖೆ ವೇಳೆ ಆರೋಪಿ ಸಮೀರ್ ರಂಜನ್ ವರ್ಚುವಲ್ ಖಾಸಗಿ ನೆಟ್‌ವರ್ಕ್(VPN) ಬಳಸಿ ಚೌಧರಿ ಅವರ ಮೊಬೈಲ್ ಸಂಖ್ಯೆಯಿಂದ ವಾಟ್ಸಾಪ್ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆರೋಪಿ ಮತ್ತು ಮಂಟು ಚೌಧರಿ ನಡುವೆ ಆಸ್ತಿ ವಿವಾದವಿದ್ದು, ಚೌಧರಿ ಅವರನ್ನು ಸಿಲುಕಿಸಲೆಂದು ರಂಜನ್ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ. ವಿಚಾರಣೆ ವೇಳೆ ಆರೋಪಿ ಅಪರಾಧ ಒಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X