ರೈಲಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೈಲು ನಿಲ್ದಾಣದಲ್ಲಿ ಸಾಮೂಹಿಕ ಅತ್ಯಾಚಾರ; ಓರ್ವ ಬಂಧನ

Date:

Advertisements

ದಿವಾಂಗ ತಂದೆಗೆ ಚಿಕಿತ್ಸೆ ಕೊಡಿಸಿ, ತನ್ನೂರಿಗೆ ಹೋಗಲು ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಗೋಪಾಲ್‌ಗಂಜ್‌ನ ಸಸಮುಸಾ ರೈಲ್ವೇ ನಿಲ್ದಾಣದಲ್ಲಿ ಘಟನೆ ನಡೆದಿದೆ. ಪ್ರಕರಣದಲ್ಲಿ ಓರ್ವ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

ಸಂತ್ರಸ್ತ ಯುವತಿ ತನ್ನ ತಂದೆಗೆ ನೇತ್ರ ಚಿಕಿತ್ಸೆ ಕೊಡಿಸಲು ಗೋಪಾಲ್‌ಗಂಜ್‌ಗೆ ಬಂದಿದ್ದರು. ಚಿಕಿತ್ಸೆಯ ಬಳಿಕ, ಸಂಜೆ ತಮ್ಮ ಊರಿಗೆ ಹಿಂದಿರುಗಲು ಸಸಮುಸಾ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಆದರೆ, ಆ ವೇಳೆಗಾಗಲೇ ರೈಲು ಹೊರಟು ಹೋಗಿತ್ತು. ಹೀಗಾಗಿ, ಇಡೀ‌ ರಾತ್ರಿ ಸಂತ್ರಸ್ತೆ ಮತ್ತು ಆಕೆಯ ತಂದೆ ರೈಲು ನಿಲ್ದಾಣದಲ್ಲೇ ಇರಬೇಕಾಯಿತು ಎಂದು ವರದಿಯಾಗಿದೆ.

Advertisements

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಯುವತಿ ನೀರು ತರಲೆಂದು ಹೋದಾಗ ಆಕೆಯನ್ನು ಮೂವರು ಕಾಮುಕರು ಎಳೆದೊಯ್ದು ರೈಲು ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ಸಹಾಯಕ್ಕಾಗಿ ಕೂಗಿಕೊಂಡಾಗ, ಸ್ಥಳೀಯರು ಆಕೆಯ ಪರಿಸ್ಥಿತಿಯನ್ನು ಗಮನಿಸಿ, ಕುಚಾಯ್ಕೋಟ್ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆ ಕೊಡಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು‌ ಗೋಪಾಲ್‌ಗಂಜ್‌ನ ಎಸ್‌ಪಿ ಅವಧೇಶ್ ದೀಕ್ಷಿತ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X