ಆಘಾತಕಾರಿ | ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚು. ಆಯೋಗ

Date:

Advertisements

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ನಡೆಸುತ್ತಿದೆ. ಪರಿಷ್ಕರಣೆಯ ಗುಡುವು ಜುಲೈ 25ರವರೆಗಿದ್ದು, ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ ಹೇಳಿಕೊಂಡಿದೆ. ಅಲ್ಲದೆ, 36 ಲಕ್ಷಕ್ಕೂ ಹೆಚ್ಚು ಜನರು ‘ಅವರ ವಿಳಾಸಗಳಲ್ಲಿ ಇಲ್ಲ’ವೆಂದೂ ಹೇಳಿದೆ. ಇದು, ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದ್ದು, ಸಾಮೂಹಿಕ ಹೊರದಬ್ಬುವಿಕೆ ಎಂದು ಬಣ್ಣಿಸಲಾಗಿದೆ.

ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ಜೂನ್ 24ರಂದು ಆಯೋಗವು ಆದೇಶಿಸಿತ್ತು. ಜೂನ್ 25ರಿಂದ ಪ್ರಕ್ರಿಯೆ ಆರಂಭವಾಯಿತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರು ತಮ್ಮ ಪೌರತ್ವ ಮತ್ತು ಬಿಹಾರದ ನವಾಸಿಗಳು ಎಂಬುದನ್ನು ಸಾಬೀತು ಮಾಡಬೇಕೆಂಬುದು ಆಯೋಗ ಹೊರಡಿಸಿದ್ದ ಆದೇಶದ ಸಾರವಾಗಿತ್ತು. ಆಯೋಗದ ಪೌರತ್ವ ಪರಿಷ್ಕರಣೆ ಮಾದರಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಎಸ್‌ಐಆರ್‌ ಮುಂದುವರೆಸಲು ಅನುಮತಿ ನೀಡಿದ ನ್ಯಾಯಾಲಯವು, ಆಧಾರ್‌ ಕಾರ್ಡ್‌ ರೀತಿಯ ಗುರುತಿನ ಚೀಟಿಗಳನ್ನು ಪುರಾವೆಗಳಾಗಿ ಪರಿಗಣಿಸಲು ಸೂಚಿಸಿತ್ತು.

ಬಿಹಾರದಲ್ಲಿ ಒಟ್ಟು 7.8 ಕೋಟಿ ನೋಂದಾಯಿತ ಮತದಾರರಿದ್ದಾರೆ. ಅವರೆಲ್ಲರೂ ಜುಲೈ 25ರೊಳಗೆ ತಮ್ಮ ಗಣತಿ ನಮೂನೆಯನ್ನು ಸಲ್ಲಿಸಬೇಕಿದೆ. ಅವುಗಳನ್ನು ಪರಿಶೀಲಿಸಿ ಆಗಸ್ಟ್‌ 1ರಂದು ಆಯೋಗವು ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

Advertisements

ಈ ನಡುವೆ, ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಯೋಗವು ಈವರೆಗೆ 7.11 ಕೋಟಿ (90.12%) ಮತದಾರರು ತಮ್ಮ ನಮೂನೆಗಳನ್ನು ಸಲ್ಲಿಸಿದ್ದಾರೆ. ಅವುಗಳಲ್ಲಿ 6.85 ಕೋಟಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಅವರಲ್ಲಿ, 36.86 ಲಕ್ಷ ಮತದಾರರು (ಒಟ್ಟು ಮತದಾರರಲ್ಲಿ 4.67%) ಅವರ ವಿಳಾಸಗಳಲ್ಲಿ ಇಲ್ಲ. ‘ಬಹುಶಃ’ ಸಾವನ್ನಪ್ಪಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಅವರಲ್ಲಿಯೂ 6,978 ಮತದಾರರನ್ನು ‘ಪತ್ತೆಹಚ್ಚಲು ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ: ‘ಎನ್‌ಆರ್‌ಸಿ’ಗಿಂತಲೂ ಹೆಚ್ಚು ಅಪಾಯಕಾರಿ

‘ಬಹುಶಃ’ ಮರಣ ಹೊಂದಿದ, ಸ್ಥಳಾಂತರಗೊಂಡ ಹಾಗೂ ಪತ್ತೆಯಾಗದ ಮತದಾರರ ನಿಖರ ಸ್ಥಿತಿಗಳನ್ನು ರಾಜಕೀಯ ಪಕ್ಷಗಳ ಜಿಲ್ಲಾ ಅಧ್ಯಕ್ಷರು ಮತ್ತು ಅವರ ಬೂತ್ ಮಟ್ಟದ ಏಜೆಂಟ್‌ಗಳ ನೆರವು ಪಡೆದು, ಜುಲೈ 25ರೊಳಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಆಯೋಗ ಹೇಳಿದೆ.

ಆಗಸ್ಟ್‌ 1ರಂದು ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 1ರವರೆಗೆ ಸಮಯ ಇರುತ್ತದೆ. ಆನಂತರ, ಸೆಪ್ಟೆಂಬರ್ 25ರೊಳಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಚುನಾವಣಾ ಅಧಿಕಾರಿಗಳು ವಿಲೇವಾರಿ ಮಾಡಲಿದ್ದಾರೆ ಎಂದು ಆಯೋಗ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X