ಬಿಲ್ಕಿಸ್ ಬಾನೊ ತೀರ್ಪಿನಲ್ಲಿ ಅಪರಾಧಿಗಳ ಪಾಲಕ ಯಾರೆಂಬುದು ಬಹಿರಂಗಗೊಂಡಿದೆ: ರಾಹುಲ್ ಗಾಂಧಿ

Date:

Advertisements

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳನ್ನು ಬಂಧಮುಕ್ತಗೊಳಿಸಿದ ಗುಜರಾತ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿಪಕ್ಷಗಳು ಸ್ವಾಗತಿಸಿವೆ.

ತೀರ್ಪು ನ್ಯಾಯಕ್ಕೆ ಸಿಕ್ಕ ಜಯ ಎಂದಿರುವುದಲ್ಲದೆ ಅಪರಾಧಿಗಳನ್ನು ಪೋಷಿಸುವ ಬಿಜೆಪಿಯ ಮಹಿಳಾ ವಿರೋಧಿ  ನಿರ್ಧಾರವನ್ನು ವಿಪಕ್ಷ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸುಪ್ರೀಂ ತೀರ್ಪು ಬಿಲ್ಕಿಸ್ ಬಾನೊ ಅವರ ನಿರಂತರ ಹೋರಾಟದಿಂದ ಬಿಜೆಪಿ ಸರ್ಕಾರದ ಅಹಂ ವಿರುದ್ಧ ದೊರೆತ ನ್ಯಾಯದ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.

Advertisements

“ಚುನಾವಣಾ ಲಾಭಕ್ಕಾಗಿ ನ್ಯಾಯವನ್ನು ಕೊಲ್ಲುವ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿಯಾಗಿದೆ. ಇಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ದೇಶದಲ್ಲಿ ಅಪರಾಧಿಗಳ ಪೋಷಕರು ಯಾರೆಂಬುದನ್ನು ಮತ್ತೊಮ್ಮೆ ಹೇಳಿದೆ” ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಂತಿಮವಾಗಿ ನ್ಯಾಯವೇ ಮೇಲುಗೈ ಸಾಧಿಸಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಅಮಾನತು

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಈ ಆದೇಶದೊಂದಿಗೆ ಬಿಜೆಪಿಯ ಮಹಿಳಾ ವಿರೋಧಿ ನೀತಿಗಳ ಮುಸುಕನ್ನು ತೆಗೆದುಹಾಕಲಾಗಿದೆ. ಇದರಿಂದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರ ಆತ್ಮವಿಶ್ವಾಸವು ಮತ್ತಷ್ಟು ಬಲಗೊಳ್ಳಲಿದೆ. ಧೈರ್ಯದೊಂದಿಗೆ ನಿರಂತರ ಹೋರಾಟ ಮಾಡಿದ ಬಿಲ್ಕಿಸ್‌ ಬಾನೋ ಅವರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಯಾವುದೇ ಸರ್ಕಾರವು ಇಂತಹ ಕ್ರಿಮಿನಲ್‌ಗಳನ್ನು ಬಿಡುಗಡೆಗೊಳಿಸುವ ಅಧಿಕಾರಕ್ಕೆ ಕೈಹಾಕಬಾರದು. ಈ ಬಗ್ಗೆ ಇನ್ನೂ ಮೂಕರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಳ ಬಯಸುತ್ತೇನೆ. ಕೇಂದ್ರ ಗೃಹ ಸಚಿವಾಲಯವು ಅಪರಾಧಿಗಳ ಮುಂಚಿತ ಬಿಡುಗಡೆಗೆ ಅನುಮೋದನೆ ನೀಡಿತ್ತು. ಮಹಿಳಾ ಸಬಲೀಕರಣದ ಬಗ್ಗೆ ಪ್ರಧಾನಮಂತ್ರಿಗಳ ಪೊಳ್ಳು ಭರವಸೆಗಳ ಹೇಳಿಕೆ ತೀರ್ಪಿನಿಂದ ಬಹಿರಂಗಗೊಂಡಿದೆ”ಎಂದಿದ್ದಾರೆ.

ವಿಪಕ್ಷಗಳಾದ ಟಿಎಂಸಿ, ಉದ್ಧವ್ ಠಾಕ್ರೆ ಬಣದ ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಹಲವು ನಾಯಕರು, ಅಪರಾಧಿಗಳನ್ನು ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರಕ್ಕೆ ಕಪಾಳ ಮೋಕ್ಷ ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X