“ಅಧಿಕಾರದ ಮದದಲ್ಲಿ ಬಿಜೆಪಿ ಕುರುಡಾಗಿದೆ”: ಶಂಕರಾಚಾರ್ಯರ ನಿರ್ಗಮನಕ್ಕೆ ಅಖಿಲೇಶ್ ಯಾದವ್ ಆಕ್ರೋಶ

Date:

ಪ್ರಯಾಗರಾಜ್‌ನ ಮಾಘ ಮೇಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಅರ್ಧಕ್ಕೆ ನಿಲ್ಲಿಸಿ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಬೇಸರದಿಂದ ನಿರ್ಗಮಿಸಿದ ಘಟನೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

“ಬಿಜೆಪಿ ಸರ್ಕಾರ ಅಧಿಕಾರದ ಮದದಲ್ಲಿ ಎಷ್ಟರಮಟ್ಟಿಗೆ ಕುರುಡಾಗಿದೆ ಎಂದರೆ, ಅದಕ್ಕೆ ಸಾಧು-ಸಂತರ ನೋವು ಕೂಡ ಕಾಣಿಸುತ್ತಿಲ್ಲ,” ಎಂದು ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

​ಬುಧವಾರ ಶಂಕರಾಚಾರ್ಯರು ಮೇಳದ ಪ್ರದೇಶವನ್ನು ತೊರೆದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿರುವ ಅಖಿಲೇಶ್, “ಜಗದ್ಗುರು ಶಂಕರಾಚಾರ್ಯರು ಪವಿತ್ರ ಸ್ನಾನವನ್ನೂ ಮಾಡದೇ, ಅವಮಾನಿತರಾಗಿ ವಾಪಸಾಗುತ್ತಿರುವುದು ದೇಶಕ್ಕೆ ‘ಅತ್ಯಂತ ಅಶುಭ’ ಸಂಗತಿಯಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರೇ ಇಂದು ಸಂತರ ಸಂಪ್ರದಾಯವನ್ನು ಮುರಿದಿದ್ದಾರೆ. ಈ ಅಹಂಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ,” ಎಂದು ಕಿಡಿಕಾರಿದ್ದಾರೆ.

ಗೋವನ್ನು ‘ರಾಷ್ಟ್ರ ಮಾತೆ’ ಎಂದು ಘೋಷಿಸಬೇಕು ಮತ್ತು ಗೋಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಎಂದು ಒತ್ತಾಯಿಸಿ ಶಂಕರಾಚಾರ್ಯರು ಮಾಘ ಮೇಳದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ತಮಗೆ ಪವಿತ್ರ ಸಂಗಮ ಸ್ನಾನಕ್ಕೆ ಮತ್ತು ಪರಿಕ್ರಮಕ್ಕೆ ಆಡಳಿತ ಮತ್ತು ಪೊಲೀಸರು ಅಡ್ಡಿಪಡಿಸಿದರು ಎಂದು ಆರೋಪಿಸಿದ ಅವರು, ಬುಧವಾರ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. “ಸರ್ಕಾರದ ನಡವಳಿಕೆ ನಮಗೆ ತೀವ್ರ ನೋವು ತಂದಿದೆ. ನಾವು ಬಾರ ಮನಸ್ಸಿನಿಂದ ಮತ್ತು ಶೂನ್ಯ ಭಾವನೆಯೊಂದಿಗೆ ಇಲ್ಲಿಂದ ಹೋಗುತ್ತಿದ್ದೇವೆ,” ಎಂದು ಸ್ವಾಮೀಜಿ ಭಾವುಕರಾಗಿ ನುಡಿದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...