ಜಾರ್ಖಂಡ್ | ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸಿ, ಸಭೆಯಲ್ಲಿ ಕುಳ್ಳಿರಿಸಿಕೊಂಡ ಬಿಜೆಪಿ ಮುಖಂಡರು!

Date:

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ.

ಈ ಆತಂಕ ಪ್ರಧಾನಿ ನರೇಂದ್ರ ಮೋದಿ ಅವರ ದ್ವೇಷ ಭಾಷಣದಲ್ಲೇ ಸ್ಪಷ್ಟವಾಗಿ ಕಾಣಿಸುತ್ತಿದೆ. ಮೊದಲ ಹಂತದ ಚುನಾವಣೆ ಮುಗಿದ ಬಳಿಕ ಮೋದಿ ಅವರು ನಿರಂತರವಾಗಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ವಿರುದ್ಧ ದ್ವೇಷಪೂರಿತ ಸುಳ್ಳು ಭಾಷಣಗಳನ್ನು ಮಾಡುತ್ತಲೇ ಇದ್ದಾರೆ. ಅಲ್ಲದೇ, ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಟೀಮ್ ಇಂಡಿಯಾದಲ್ಲಿ ಎಲ್ಲ ಮುಸ್ಲಿಮರಿಗೆ ಅವಕಾಶ ಸಿಗಲಿದೆ ಎಂಬ ಕೀಳುಮಟ್ಟದ ಭಾಷಣ ಕೂಡ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಎಲ್ಲ ಬೆಳವಣಿಗೆಯ ನಡುವೆಯೇ, ಜಾರ್ಖಂಡ್‌ನ ಬಿಜೆಪಿ ಮುಖಂಡರು ಮುಸ್ಲಿಂ ಸಮುದಾಯದೊಂದಿಗೆ ಸಂವಾದ ನಡೆಸಲು ಸಭೆಯೊಂದನ್ನು ಆಯೋಜಿಸಿದ್ದರು. ಆದರೆ, ಈ ಸಭೆಗೆ ಹೆಚ್ಚಿನ ಮುಸ್ಲಿಮರು ಬಾರದಿದ್ದಕ್ಕೆ, ಕೆಲವು ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸುವಂತೆ ಮಾಡಿ, ಪೇಚಿಗೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಇದು ಈಗ ದೊಡ್ಡಮಟ್ಟದ ವಿವಾದಕ್ಕೂ ಕಾರಣವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಎಲ್ಲ ವಿಚಾರವನ್ನು ಬಯಲಿಗೆ ಎಳೆದದ್ದು N4 NEWS BHARAT ಎನ್ನುವ ಜಾರ್ಖಂಡ್‌ನ ರಾಂಚಿಯ ಸ್ಥಳೀಯ ಯೂಟ್ಯೂಬ್‌ ಚಾನೆಲ್. ರಾಂಚಿಯ N4 ನ್ಯೂಸ್‌ನ ವೈರಲ್ ಕ್ಲಿಪ್ ಅನ್ನು ಆಲ್ಟ್‌ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ವೇದಿಕೆಯೊದಗಿಸಿದೆ.

ತಮ್ಮ ಟ್ವೀಟ್‌ನಲ್ಲಿ ಮೊಹಮ್ಮದ್ ಝುಬೇರ್ ಅವರು ವಿಡಿಯೋವನ್ನು ಹಂಚಿಕೊಳ್ಳುತ್ತಾ, “ತಮ್ಮ ಸಭೆಗೆ ಬಿಜೆಪಿ ನಾಯಕರು ಮುಸ್ಲಿಮರಂತೆ ವೇಷ ಧರಿಸಿ ಹಿಂದೂಗಳನ್ನು ಒಟ್ಟುಗೂಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಂಚಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಜಯ್ ಸೇಠ್ ಅವರು ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಮುಸ್ಲಿಂ ಸಮುದಾಯದ ಬೆಂಬಲವೂ ಬೇಕು ಎಂಬ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಸಭೆಯನ್ನು ಆಯೋಜಿಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಯಾಗಿ ಆರು ಬಾರಿ ಶಾಸಕರಾಗಿದ್ದ ಸಿ ಪಿ ಸಿಂಗ್ ಕೂಡ ಭಾಗವಹಿಸಿದ್ದರು.

ಈ ಸಭೆಯಲ್ಲಿ ಸೇರಿದವರ ಬಗ್ಗೆ N4 ನ್ಯೂಸ್‌ನ ಪ್ರತಿನಿಧಿಗಳು ಬಿಜೆಪಿ ಮುಖಂಡರಲ್ಲಿ ಕೇಳಿದಾಗ, “ಇಲ್ಲಿ ಭಾಗವಹಿಸಿದ್ದ ಎಲ್ಲರೂ ಮುಸ್ಲಿಮರು. ಕೆಲವರು ಟೋಪಿ ಧರಿಸಿದ್ದರು, ಇನ್ನು ಕೆಲವರು ಧರಿಸಿಲ್ಲ. ಇವರೆಲ್ಲರೂ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಬಂದು ಹಾಜರಾಗಿದ್ದಾರೆ” ಎಂದು ತಿಳಿಸಿದ್ದರು.

ಆ ಬಳಿಕ ಸಭೆಯಲ್ಲಿದ್ದವರೊಂದಿಗೆ ಮಾತನಾಡಿಸಿದಾಗ, ಹೆಸರು ಹಿಂದೂಗಳದ್ದೆಂದು ಗೊತ್ತಾಗಿದೆ. ಅಲ್ಲದೇ, ಅವರ ಕಿಸೆಯಲ್ಲಿದ್ದ ಆಧಾರ್ ಕಾರ್ಡ್‌ ಅನ್ನು ಕೂಡ ಪರಿಶೀಲಿಸಿದ್ದಾರೆ. ಈ ಬಗ್ಗೆ ಟೋಪಿ ಧರಿಸಿದ್ದ ಹಿಂದೂಗಳಲ್ಲಿ N4 ನ್ಯೂಸ್‌ನ ಪ್ರತಿನಿಧಿ ಕೇಳಿದಾಗ, “ನಮಗೇನೂ ಗೊತ್ತಿಲ್ಲ. ನಮ್ಮ ಕಿಸೆಯಲ್ಲಿಟ್ಟಿದ್ದರು. ಅದನ್ನು ತಲೆಯಲ್ಲಿ ಇಟ್ಟುಕೊಳ್ಳಲು ಬಿಜೆಪಿಯವರು ತಿಳಿಸಿದ್ದರು” ಎಂದು ಹೇಳಿಕೆ ನೀಡಿದ್ದಾರೆ.

ಹಿಂದೂಗಳಿಗೆ ಟೋಪಿ ನೀಡುವ ಮೂಲಕ ಬಿಜೆಪಿಯೊಂದಿಗೆ ಮುಸ್ಲಿಮರು ಇದ್ದಾರೆ ಎಂಬುದನ್ನು ತೋರಿಸಲು ಬಿಜೆಪಿ ಮುಖಂಡರು ಯತ್ನಿಸಿದ್ದಾರೆ. ಆ ಮೂಲಕ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಜಾರ್ಖಂಡ್‌ನಲ್ಲಿ ಈ ಬೆಳವಣಿಗೆ ಈಗ ದೊಡ್ಡ ಮಟ್ಟದಲ್ಲಿ ರಾಜಕೀಯ ಚರ್ಚೆಗೂ ವೇದಿಕೆಯೊದಗಿಸಿದೆ.

ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಈ ಬಗ್ಗೆ ಹಲವು ಮಂದಿ ಬಿಜೆಪಿ ನಾಯಕರ “ಬಿಜೆಪಿಯು ಮತ ಗಳಿಸಲು ಹಿಂದೂಗಳನ್ನೇ ಮುಸ್ಲಿಮರನ್ನಾಗಿ ಬಿಂಬಿಸಲು ಹೊರಟಿದೆ. ಹಿಂದೂಗಳು ಕಷ್ಟದಲ್ಲಿದ್ದಾರೆ ಯಾರಿಂದ ಎಂಬುದು ಈಗ ಅರ್ಥವಾಯಿತಲ್ಲವೇ?” ಎಂದು ಪೋಸ್ಟ್ ಹಾಕುತ್ತಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ| ಭಯೋತ್ಪಾದಕ ದಾಳಿ; ಬಿಜೆಪಿಯ ಮಾಜಿ ಸರಪಂಚ ಹತ್ಯೆ, ಪ್ರವಾಸಿಗರಿಗೆ ಗಾಯ

ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ...

ಉತ್ತರ ಪ್ರದೇಶ | ವ್ಯಕ್ತಿಯೋರ್ವನ ಬ್ಯಾಂಕ್ ಖಾತೆಗೆ 9,900 ಕೋಟಿ ರೂ. ಜಮೆ; ಬೆರಗಾದ ಖಾತೆದಾರ

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಬರೋಬ್ಬರಿ 9,900...

ಮೋದಿ ಸುಳ್ಳುಗಳು | ಪ್ರಗತಿಪರ ನೀತಿಗಳು ಮತ್ತು ದೃಢ ಆಡಳಿತ ನೀಡಿದ್ದಾರಾ ಮೋದಿ?

ಮಹಾರಾಷ್ಟ್ರದ ಮುಂಬೈನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

ಛತ್ತೀಸ್‌ಗಢ| ಮದುವೆಗೆ ನಕಾರ; ಯುವತಿ ಕುಟುಂಬದ ಐವರನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಛತ್ತೀಸ್‌ಗಢದ ಸಾರಂಗಢ-ಬಿಲೈಗಢ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ...