ಶಿವಸೇನೆಯ 6 ಸಂಸದರನ್ನು ಸೆಳೆದ BJP, ಅಸಹಾಯಕರಾದ ಠಾಕ್ರೆ; UPಯಲ್ಲೂ ಶುರುವಾಯ್ತು ರಣತಂತ್ರ!

Date:

ದೇಶದ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲದ ಸದ್ದು ಜೋರಾಗಿದ್ದು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ವಿರೋಧ ಪಕ್ಷಗಳಿಗೆ ಬಿಜೆಪಿ ಭಾರಿ ಆಘಾತ ನೀಡಿದೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬಣದ 6 ಮಂದಿ ಲೋಕಸಭಾ ಸಂಸದರನ್ನು ಬಿಜೆಪಿ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದರೆ, ಇತ್ತ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಾರ್ಟಿಯನ್ನು ಒಡೆಯಲು ವೇದಿಕೆ ಸಿದ್ಧಗೊಳಿಸಿದೆ.

- Advertisement -

ಈ ಹಿಂದೆ ಏಕನಾಥ್ ಶಿಂಧೆ ಬಂಡಾಯದಿಂದಾಗಿ ಪಕ್ಷ ಮತ್ತು ಅಧಿಕಾರ ಎರಡನ್ನೂ ಕಳೆದುಕೊಂಡಿದ್ದ ಉದ್ಧವ್ ಅವರಿಗೆ, ಈಗ ಗೆದ್ದು ಬಂದಿರುವ 6 ಮಂದಿ ಸಂಸದರು ಕೈಕೊಟ್ಟಿರುವುದು ನುಂಗಲಾರದ ತುತ್ತಾಗಿದೆ. ಮೂಲಗಳ ಪ್ರಕಾರ, ಈ ಆರು ಸಂಸದರು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯೊಂದಿಗೆ ಕೈಜೋಡಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಉದ್ಧವ್ ಠಾಕ್ರೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲಾಗದೆ ಸಂಪೂರ್ಣ ಅಸಹಾಯಕರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇತ್ತ ಉತ್ತರ ಪ್ರದೇಶದಲ್ಲೂ ವಿರೋಧ ಪಕ್ಷದ ಪಾಳಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಕಳೆದ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಸಮಾಜವಾದಿ ಪಾರ್ಟಿಯ ಕೋಟೆಯನ್ನು ಧ್ವಂಸಗೊಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸಿದೆ. SPಯ ಹಲವು ಸಂಸದರು ಈಗಾಗಲೇ ಕಮಲ ಪಾಳಯದ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ದಿನಗಣನೆ ಆರಂಭವಾಗಿದೆ ಎಂಬ ವದಂತಿಗಳು ದಟ್ಟವಾಗಿವೆ.

ಈ ಬೆಳವಣಿಗೆಗಳಿಗೆ ಪುಷ್ಟಿ ನೀಡುವಂತೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಮಾಧ್ಯಮಗಳ ಮುಂದೆ ಬಹಿರಂಗ ಬಾಂಬ್ ಸಿಡಿಸಿದ್ದಾರೆ. ಸಮಾಜವಾದಿ ಪಕ್ಷದ ಹಲವು ಸಂಸದರು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಯಾದವ್ ಅವರ ಏಕಪಕ್ಷೀಯ ನಿರ್ಧಾರಗಳು ಮತ್ತು ಪಕ್ಷದೊಳಗಿನ ಆಂತರಿಕ ಅಸಮಾಧಾನದಿಂದ ಬೇಸತ್ತಿರುವ ಸಂಸದರು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಬೆಂಬಲಿಸಲು ಸಿದ್ಧರಾಗಿದ್ದಾರೆ ಎಂದು ಮೌರ್ಯ ತಿಳಿಸಿದ್ದು, ಉತ್ತರ ಪ್ರದೇಶದ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.

ಇದನ್ನೂ ಓದಿ: ನಾವಿಕರ ಸಾವು, ಭಾರಿ ಸುಂಕದ ನಡುವೆ ಟ್ರಂಪ್ ಹೊಗಳಿಕೆಗೆ ಮಾರುಹೋದವೇ ಭಾರತೀಯ ಮಾಧ್ಯಮಗಳು?

ಒಂದೆಡೆ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡಿರುವ ಬಿಜೆಪಿ, ಮತ್ತೊಂದೆಡೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿಯನ್ನು ಸೀಳಲು ಮುಂದಾಗಿರುವುದು ದೇಶದ ಒಟ್ಟಾರೆ ರಾಜಕೀಯ ಸಮೀಕರಣವನ್ನು ಬದಲಾಯಿಸುವ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...