ಜಮ್ಮು ಕಾಶ್ಮೀರ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿ ಹಿಂತೆಗೆದುಕೊಂಡ ಬಿಜೆಪಿ

Date:

Advertisements

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮೊದಲ ಹಂತದಲ್ಲಿ 44 ಅಭ್ಯರ್ಥಿಗಳನ್ನು ಘೋಷಿಸಿದ ಕೆಲವೇ ಸಮಯದಲ್ಲಿ ವಾಪಸ್‌ ತೆಗೆದುಕೊಂಡಿದೆ. ಬಿಜೆಪಿ ಮೂಲಗಳ ಪ್ರಕಾರ ಹೊಸ ಪಟ್ಟಿಯನ್ನು ಕೆಲವು ತಿದ್ದುಪಡಿಗಳೊಂದಿಗೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಮೊದಲ ಹಂತದಲ್ಲಿ ಮೂರು ಹಂತಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ರದ್ದು ಮಾಡುವ ಮುನ್ನ ಸೆ.18 ರಂದು ನಡೆಯುವ ಮೊದಲ ಹಂತದಲ್ಲಿ 15 ಅಭ್ಯರ್ಥಿಗಳು, ಸೆ.25 ರಂದು ನಡೆಯುವ ಎರಡನೇ ಹಂತದಲ್ಲಿ 10 ಅಭ್ಯರ್ಥಿಗಳು ಹಾಗೂ ಅ.1 ರಂದು ನಡೆಯುವ ಮೂರನೇ ಹಂತದಲ್ಲಿ 19 ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು.

ರದ್ದಾದ ಪಟ್ಟಿಯಲ್ಲಿ 14 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿತ್ತು. ಇದರಲ್ಲಿ ಮುಸ್ಲಿಂ ಬಾಹುಳ್ಯದ 8 ಕ್ಷೇತ್ರಗಳು ಸೇರಿದ್ದವು. ಜೊತೆಯಲ್ಲಿ ಇಬ್ಬರು ಕಾಶ್ಮೀರಿ ಪಂಡಿತರಿಗೂ ಘೋಷಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

44 ಅಭ್ಯರ್ಥಿಗಳಲ್ಲಿ ಕೇವಲ ಒಬ್ಬರು ಮಹಿಳೆಯರಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ನಾಲ್ವರು ದಲಿತರಿಗೆ ಟಿಕೆಟ್ ಅಂತಿಮಗೊಳಿಸಲಾಗಿತ್ತು. ಹಿಂತೆಗೆದುಕೊಂಡ ಪಟ್ಟಿಯಲ್ಲಿ ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಹಾಗೂ ಮಾಜಿ ಡಿಸಿಎಂಗಳಾದ ನಿರ್ಮಲ್ ಸಿಂಗ್ ಹಾಗೂ ಕವೀಂದ್ರ ಗುಪ್ತ ಅವರಿಗೆ ಟಿಕೆಟ್ ನೀಡಿರಲಿಲ್ಲ.

ಸೆ. 18 ರಿಂದ ಅ.1ರವರೆಗೆ ನಡೆಯುವ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 4 ರಂದು ಫಲಿತಾಂಶ ಘೋಷಿಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X