ED ಕಚೇರಿಗೆ ಬೆಂಕಿ: ಮೆಹುಲ್‌ ಚೋಕ್ಸಿ, ನೀರವ್ ಮೋದಿ ಸೇರಿ ಹಲವು ಭ್ರಷ್ಟರ ದಾಖಲೆಗಳು ಸುಟ್ಟು ಹೋದವೇ?

Date:

Advertisements
ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ, ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಬಚಾವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಂಬೈನಲ್ಲಿ ಭಾನುವಾರ(ಏ.27)ರಂದು ಮಧ್ಯರಾತ್ರಿ ದಕ್ಷಿಣ ಮುಂಬೈನಲ್ಲಿರುವ ಇ.ಡಿ ಕಚೇರಿಗೆ ಬೆಂಕಿ ಹೊತ್ತಿಕೊಂಡಿತ್ತು. 10 ಗಂಟೆಗಳಿಗೂ ಹೆಚ್ಚು ಕಾಲ ಬೆಂಕಿ ಉರಿದಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಆದರೆ ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಅವರ ಹಲವು ಭ್ರಷ್ಟಾಚಾರ ಪ್ರಕರಣಗಳ ದಾಖಲೆಗಳು ಹಾಗೂ ಕಾಗದ ಪತ್ರಗಳು ಸುಟ್ಟುಹೋಗಿದೆ ಎಂದು ಹೇಳಲಾಗುತ್ತಿದೆ.

ಮಾಧ್ಯಮಗಳ ವರದಿಯ ಪ್ರಕಾರ ಯಾವ ಮಟ್ಟದ ಹಾನಿಯುಂಟಾಗಿದೆ ಎಂಬುದನ್ನು ಇ.ಡಿ ದಾಖಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಕಚೇರಿಯಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳ ಭೌತಿಕ ಹಾಗೂ ಡಿಜಿಟಲ್‌ ತನಿಖೆಯ ದಾಖಲೆಗಳನ್ನು ಇಡಲಾಗಿತ್ತು. ತನಿಖೆ ನಡೆಯುತ್ತಿದ್ದ ದಾಖಲೆಗಳು ಸುಟ್ಟುಹೋಗಿರಬಹುದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಮೂಲಗಳ ಪ್ರಕಾರ ಕಂಪ್ಯೂಟರ್‌ಗಳು ಹಾಗೂ ದಾಖಲೆಗಳನ್ನು ಒಳಗೊಂಡ ತನಿಖೆಗೆ ಸಂಬಂಧಪಟ್ಟ ಸ್ವತ್ತುಗಳನ್ನು ಕಚೇರಿಯಲ್ಲಿ ಇಡಲಾಗಿತ್ತು ಎನ್ನಲಾಗಿದೆ.

ಹಾಗೆಯೇ ಬಹುತೇಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿತ್ತು ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯವು ಅವುಗಳನ್ನು ಪುನಃ ಮರಳಿಪಡೆಯುವ ಸಾಧ್ಯತೆಯಿದೆ ಎಂದೂ ಕೂಡ ಹೇಳಲಾಗುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಮೂಲಗಳ ಪ್ರಕಾರ ಪ್ರಕರಣಗಳ ತನಿಖೆಯ ದಾಖಲೆಗಳನ್ನು ಇ.ಡಿ ಆರೋಪಪಟ್ಟಿಯ ಮೂಲಕ ಕೋರ್ಟ್‌ಗೆ ಸಲ್ಲಿಸಿದ್ದು, ಅವುಗಳ ಪ್ರತಿಗಳನ್ನು ತನ್ನಲ್ಲಿ ಇಟ್ಟುಕೊಂಡಿತ್ತು. ಆದರೆ ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕೈಸರ್‌ ಹಿಂದ್‌ ಪ್ರದೇಶದಲ್ಲಿರುವ ನಾಲ್ಕು ಮಹಡಿಗಳ ಪುರಾತನ ಕಟ್ಟಡದಲ್ಲಿ ಇ.ಡಿ ನಾಲ್ಕನೇ ಹಾಗೂ ಮೊದಲ ಮಹಡಿಯಲ್ಲಿ ಕಚೇರಿ ಹೊಂದಿದೆ. ನಾಲ್ಕನೇ ಮಹಡಿಯಲ್ಲಿರುವ ಹೆಚ್ಚುವರಿ ನಿರ್ದೇಶಕರ ಕಚೇರಿ ಹಾಗೂ ತನಿಖಾ ಘಟಕಗಳಿಗೆ ಬೆಂಕಿ ಬಿದ್ದಿದ್ದು, ಘಟನೆ ನಂತರ ಈ ಮಹಡಿಯನ್ನು ಸದ್ಯಕ್ಕೆ ಮುಚ್ಚಲಾಗಿದೆ. ಅಗ್ನಿಶಾಮಕ ದಳದ ವರದಿಯ ಪ್ರಕಾರ ಕಚೇರಿಗೆ ಮಧ್ಯರಾತ್ರಿ 2.30ರ ಸಮಯದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಆ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಮಾತ್ರ ಸ್ಥಳದಲ್ಲಿದ್ದರು. ಯಾರಿಗೂ ಗಾಯಗಳಾಗಿಲ್ಲ.

ಹೆಚ್ಚು ಹೊಗೆ ಆವರಿಸಿದ ಕಾರಣ ಅಗ್ನಿ ಶಾಮಕ ಸಿಬ್ಬಂದಿ ಕೂಡ ಘಟನೆ ನಡೆದ ಪ್ರಮುಖ ಸ್ಥಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಹಳೆಯ ಕಟ್ಟಡವಾದ ಕಾರಣ ಕೇವಲ ಒಂದು ಮೆಟ್ಟಿಲು ಪ್ರದೇಶ ಮಾತ್ರ ಇದೆ. ಅಗ್ನಿ ಶಾಮಕ ಸಿಬ್ಬಂದಿ ಪ್ರಕಾರ ದುರಂತದಲ್ಲಿ ಅಪಾರ ಪ್ರಮಾಣದ ಕಾಗದ ಪತ್ರಗಳು, ದಾಖಲೆಗಳು ಪೀಠೋಪಕರಣಗಳು ಬೆಂಕಿಯಲ್ಲಿ ನಾಶವಾಗಿವೆ ಎನ್ನಲಾಗುತ್ತಿದೆ. ಭಾನುವಾರ ಮಧ್ಯಾಹ್ನದ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ತಹಬದಿಗೆ ತರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X