ಕೇರಳ: ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕ ಸಾವು

Date:

Advertisements

ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

14 ವರ್ಷದ ಬಾಲಕ ಮೃದುಲ್‌ ಚಿಕಿತ್ಸೆ ಫಲಕಾರಿಯಾಗದೆ ಬುಧಬಾರ ರಾತ್ರಿ 11.20ರ ಸಮಯದಲ್ಲಿ ಮೃತಪಟ್ಟಿದ್ದಾನೆ ಎಂದು ಕೇರಳ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ವರ್ಷದ ಮೇ ತಿಂಗಳಿನಿಂದ ರಾಜ್ಯದಲ್ಲಿ ಮೆದುಳು ತಿನ್ನುವ ರೋಗದಿಂದ ಮೃತಪಟ್ಟಿರುವ ಮೂರನೇ ಪ್ರಕರಣ ಇದಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಮೇ 21 ರಂದು ಮಲಪ್ಪುರಂನಲ್ಲಿ 5 ವರ್ಷದ ಬಾಲಕಿ ಮೃತಪಟ್ಟಿದ್ದಳು. ನಂತರ ಜೂನ್‌ 25ರಂದು ಕಣ್ಣೂರಿನಲ್ಲಿ13 ವರ್ಷದ ಬಾಲಕಿ ಮೆದುಳು ತಿನ್ನುವ ಅಮೀಬಾ ಕಾಯಿಲೆಯಿಂದ ಅಸುನೀಗಿದ್ದಳು.

ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ಸಣ್ಣ ಕೊಳವೊಂದರಲ್ಲಿ ಆಟವಾಡಿದ ನಂತರ ಬಾಲಕನಿಗೆ ಆನಾರೋಗ್ಯವುಂಟಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯಕೀಯ ಪರಿಣಿತರ ಪ್ರಕಾರ ಮೆದುಳು ತಿನ್ನುವ ಜೀವಂತ ಅಮೀಬಾ ಬ್ಯಾಕ್ಟೀರಿಯ ಕಲುಷಿತ ನೀರಿನಿಂದ ಮೂಗಿನ ಮೂಲಕ ದೇಹವನ್ನು ಪ್ರವೇಶಿಸುತ್ತದೆ. ನೀರಿನಲ್ಲಿ ಆಟವಾಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

Download Eedina App Android / iOS

X