ತಂಗಿಯ ಮೃಹದೇಹ ಹೊತ್ತು 5 ಕಿ.ಮೀ ನಡೆದ ಸಹೋದರ; ಅಣ್ಣನ ಅಸಹಾಯಕತೆ ವಿಡಿಯೋದಲ್ಲಿ ಸೆರೆ

Date:

Advertisements

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿನ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರವಾಹ ಪೀಡಿತ ಕುಟುಂಬದ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ದೇಶದ ಜನರ ಹೃದಯ ಕಲಕುವಂತೆ ಮಾಡಿದೆ.

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಲಖಿಂಪುರ ಖೇರಿ ಪ್ರದೇಶದ ನೂರಾರು ಹಳ್ಳಿಗಳು ಪ್ರವಾಹಕ್ಕೆ ಸಿಲುಕಿವೆ. ಹಳ್ಳಿಗಳು ಜಲಾವೃತವಾಗಿವೆ. ರಸ್ತೆಗಳು ಬಂದ್‌ ಆಗಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ, ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ 12ನೇ ತರಗತಿ ಓದುತ್ತಿದ್ದ ಬಾಲಕಿ ಶಿವಾನಿಯನ್ನು ಹೇಗೋ ಹರಸಾಹಸಪಟ್ಟು ಆಕೆಯ ಸಹೋದರ ಮನೋಜ್ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ, ಆಕೆಗೆ ಚಿಕಿತ್ಸೆ ಫಲಿಸದೆ, ಬಾಲಕಿ ಸಾವನ್ನಪ್ಪಿದ್ದಾರೆ.

ಪ್ರವಾಹದಿಂದಾಗಿ ತಂಗಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಸಾಧ್ಯವಾದ ಮನೋಜ್ ತನ್ನ ತಂಗಿಯ ಮೃತದೇಹವನ್ನು ಮರಳಿ ಮನೆಗೆ ಕರೆತರಲು ಆ್ಯಂಬುಲೆನ್ಸ್‌ ಕೂಡ ಸಿಗದ ಪರಿಣಾಮ, ಹೆಗಲ ಮೇಲೆ ಹೊತ್ತಿಕೊಂಡು ಹೋಗಿದ್ದಾರೆ. ಮನೋಜ್ ತನ್ನ ತಂಗಿಯ ಮೃತದೇಹ ಹೊತ್ತು ವೇಗವಾಗಿ ನಡೆಯುತ್ತಿರುವ ವಿಡಿಯೋದಲ್ಲಿ ಕಂಡುಬಂದಿದೆ.

Advertisements

 

ಪಾಲಿಯಾ ನಗರದಲ್ಲಿ ಶಿವಾನಿಯನ್ನು ಪರೀಕ್ಷಿಸಿದ ವೈದ್ಯರು, ಆಕೆ ಟೈಫಾಯಿಡ್ ನಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಔಷಧಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಶಿವಾನಿಯ ಆರೋಗ್ಯ ಸ್ಥಿತಿ ಹದಗೆಡತೊಡಗಿತು. ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಆದರೆ, ಪಾಲಿಯಾ ನಗರವು ಪ್ರವಾಹಕ್ಕೆ ಸಿಲುಕಿ, ಜಲಾವೃತಗೊಂಡಿದೆ. ನಗರದ ಹಲವಾರು ರಸ್ತೆಗಳು ಬಂದ್ ಆಗಿವೆ. ಶಾರದಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಲಖಿಂಪುರ ಜಿಲ್ಲಾಸ್ಪತ್ರೆಗೆ ತೆರಳಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ, ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗದ ಕಾರಣ, ಶಿವಾನಿ ಸಾವನ್ನಪ್ಪಿದ್ದಾಳೆ ಎಂದು ಆಕೆಯ ತಂದೆ ದೇವೇಂದ್ರ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X