ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಬರ್ಬರ ಹತ್ಯೆ: 8 ಜನರ ಬಂಧನ

Date:

Advertisements

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಬಹುಜನ ಸಮಾಜ ಪಕ್ಷ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪವೇ ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿರುವ ತನ್ನ ಮನೆಯ ಬಳಿ ಬಿಎಸ್‌ಪಿಯ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕುಟುಂಬಸ್ಥರು ಆರ್ಮ್‌ಸ್ಟ್ರಾಂಗ್ ಅವರನ್ನು ಕರೆದೊಯ್ದಿದ್ದು, ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ?  ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

Advertisements

ಕಳೆದ ವರ್ಷ ಗ್ಯಾಂಗ್‌ಸ್ಟಾರ್ ಆರ್ಕಾಟ್ ಸುರೇಶ್ ಹತ್ಯೆಗೆ ಇದು ಪ್ರತೀಕಾರದ ಕೊಲೆಯಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು “ನಾವು ತನಿಖೆ ನಡೆಸುತ್ತಿದ್ದೇವೆ. ಈ ಕೊಲೆಯು ಈ ಹಿಂದಿನ ಕೊಲೆಗೆ ಸಂಬಂಧ ಹೊಂದಿರುವಂತೆ ತೋರುತ್ತಿದೆ” ಎಂದು ಹೇಳಿದ್ದಾರೆ.

“ಕೊಲೆ ಪ್ರಕರಣದಲ್ಲಿ ನಾವು ಇದುವರೆಗೆ 8 ಶಂಕಿತರನ್ನು ಬಂಧಿಸಿದ್ದೇವೆ. ಇದು ಪ್ರಾಥಮಿಕ ತನಿಖೆಯಾಗಿದೆ. ಹತ್ತು ತಂಡಗಳನ್ನು ರಚಿಸಲಾಗಿದೆ. ನಾವು ಅಪರಾಧಿಗಳನ್ನು ಪತ್ತೆ ಹಚ್ಚಲಿದ್ದೇವೆ. ಈ ಶಂಕಿತರ ವಿಚಾರಣೆಯ ನಂತರ, ನಾವು ಕೊಲೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲಿದ್ದೇವೆ” ಎಂದು ಚೆನ್ನೈನ ಹಿರಿಯ ಪೊಲೀಸ್ ಅಧಿಕಾರಿ ಆಸ್ರಾ ಗಾರ್ಗ್ ಹೇಳಿದ್ದಾರೆ.

ವಕೀಲರಾಗಿದ್ದ ಆರ್ಮ್‌ಸ್ಟ್ರಾಂಗ್ ಅವರು 2006ರಲ್ಲಿ ಚೆನ್ನೈ ಕಾರ್ಪೊರೇಷನ್ ಕೌನ್ಸಿಲ್‌ಗೆ ಆಯ್ಕೆಯಾದರು. ಎರಡು ವರ್ಷಗಳ ಹಿಂದೆ ಚೆನ್ನೈನಲ್ಲಿ ಮೆಗಾ ರ್‍ಯಾಲಿಯನ್ನು ಆಯೋಜಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯನ್ನು ಆಹ್ವಾನಿಸಿದ ನಂತರ ಹೆಚ್ಚು ಮುನ್ನಲೆಗೆ ಬಂದರು.

 

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X