ಅಧಿವೇಶನ ಆರಂಭ; ರಾಜ್ಯಸಭೆಯಲ್ಲಿಂದು ಮಣಿಪುರ ಬಜೆಟ್ ಚರ್ಚೆ

Date:

Advertisements

ಹೋಳಿ ಹಬ್ಬದ ರಜೆಯ ಬಳಿಕ ಇಂದಿನಿಂದ ಮತ್ತೆ ಬಜೆಟ್ ಅಧಿವೇಶನ ಆರಂಭವಾಗಿದೆ. ಇಂದು ರಾಜ್ಯಸಭೆಯಲ್ಲಿ ಮಣಿಪುರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ, ರಾಜ್ಯಸಭೆ – ಉಭಯ ಸದನಗಳಲ್ಲಿಯೂ ಪ್ರಮುಖ ವರದಿ, ಮಸೂದೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಸುಮಾರು ಎರಡು ವರ್ಷಗಳ ಅವಧಿಯಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸರ್ಕಾರವು ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಮಣಿಪುರವನ್ನು ಕಟ್ಟಲು ನೀವು ಇಚ್ಛಿಸದಿದ್ದರೆ, ಅದನ್ನು ಆಳುವ ಹಕ್ಕು ನಿಮಗಿಲ್ಲ; ಸಂಸತ್‌ನಲ್ಲಿ ಸಂಸದ ಆರ್ಥರ್ ಅಬ್ಬರ

Advertisements

ಅದಾದ ಬಳಿಕ ಮಾರ್ಚ್ 11ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಣಿಪುರ ಬಜೆಟ್ ಅನ್ನು ಮಂಡಿಸಿದ್ದಾರೆ. ಸುಮಾರು 35,103.90 ಕೋಟಿ ರೂಪಾಯಿ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ.

ಇನ್ನು ಮಣಿಪುರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ಈ ಹಿಂದಿನ 32,656.81 ಕೋಟಿ ರೂಪಾಯಿ ಬಜೆಟ್‌ಗಿಂತ ಅಧಿಕ ಬಜೆಟ್ ಅನ್ನು 2025-26ನೇ ಹಣಕಾಸು ವರ್ಷದಲ್ಲಿ ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಹಾಗೆಯೇ ಮಣಿಪುರದ ಕಾನೂನು ಸುವ್ಯವಸ್ಥೆ, ಹಿಂಸಾಚಾರದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X