ಉತ್ತರಾಖಂಡದ ಸುರಂಗ ಕಾರ್ಮಿಕರನ್ನು ರಕ್ಷಿಸಿದ್ದ ವಕೀಲ್ ಹಸನ್ ಮನೆ ಧ್ವಂಸಗೊಳಿಸಿದ ದೆಹಲಿ ಅಭಿವೃದ್ಧಿ ಪ್ರಾಧಿಕಾರ!

Date:

ಉತ್ತರಾಖಂಡದ ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ಉಳಿಸಿದ್ದ ‘ಇಲಿ ಬಿಲ ಗಣಿಗಾರಿಕೆ’ (ರ‌್ಯಾಟ್ ಹೋಲ್‌ ಮೈನಿಂಗ್‌) ತಂತ್ರಗಾರಿಕೆ ಮೂಲಕ ರಂಧ್ರ ಕೊರೆಯುವ ಗುಂಪಿನ ನೇತೃತ್ವ ವಹಿಸಿದ್ದ ವಕೀಲ್ ಹಸನ್ ಅವರ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿರುವುದಾಗಿ ವರದಿಯಾಗಿದೆ.

- Advertisement -

ಅಕ್ರಮ ಒತ್ತುವರಿಯ ನೆಪವೊಡ್ಡಿ ಫೆಬ್ರವರಿ 28ರ ಬುಧವಾರದಂದು ಡಿಡಿಎ ಅಧಿಕಾರಿಗಳು ಬುಲ್ಡೋಜರ್ ಅನ್ನು ತಂದು ವಕೀಲ್ ಹಸನ್ ಅವರ ಮನೆಯನ್ನು ಕೆಡವಿದ್ದಾರೆ. ಅವರ ಮನೆಯನ್ನು ಧ್ವಂಸಗೊಳಿಸಿದಾಗ ಹಸನ್ ಅವರನ್ನು ಪೊಲೀಸರು ಬಂಧಿಸಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಮನೆ ಕೆಡಹುವ ಮುನ್ನ ಡಿಡಿಎ ನನಗೆ ಯಾವುದೇ ನೋಟಿಸ್ ನೀಡಿರಲಿಲ್ಲ ಎಂದು ಹಸನ್ ತಿಳಿಸಿದ್ದು, “ಉತ್ತರಾಖಂಡದ ಕಾರ್ಮಿಕರನ್ನು ರಕ್ಷಿಸಿದಾಗ ನನಗೆ ಕೋಟಿ ರೂಪಾಯಿಯ ಬಹುಮಾನ ಘೋಷಿಸಿದ್ದರು. ಆದರೆ ನನಗೆ ನನ್ನ ಮನೆಯನ್ನು ಮಾತ್ರ ಬಹುಮಾನವಾಗಿ ನೀಡಿ ಎಂದು ಕೇಳಿದ್ದೆ. ಅದನ್ನು ನೀಡುವ ಬದಲಾಗಿ, ಡಿಡಿಎ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ನನ್ನ ಮನೆಯನ್ನು ಕೆಡವಿದ್ದಾರೆ” ಎಂದು ದೆಹಲಿಯಲ್ಲಿ ರಾಕ್‌ವೆಲ್ ಎಂಟರ್‌ಪ್ರೈಸಸ್ ಎಂಬ ರಾಟ್‌ ಹೋಲ್‌(Rat Miner) ಮೈನಿಂಗ್‌ ಸಂಸ್ಥೆ ನಡೆಸುತ್ತಿರುವ ವಕೀಲ್ ಹಸನ್ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 15ರಂದು ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರನ್ನು ರಕ್ಷಿಸುವ ಎಲ್ಲ ಪ್ರಯತ್ನಗಳು ಫಲಪ್ರದವಾಗದಿದ್ದಾಗ,  ಹಸನ್ ಮತ್ತವರ ಇಲಿ ಗಣಿಗಾರರ ತಂಡವನ್ನು ಸಿಲ್ಕ್ಯಾರಾಕ್ಕೆ ಕರೆಸಲಾಗಿತ್ತು. ಇವರ ತಂಡದ ನಿರಂತರ ಶ್ರಮದ ಫಲವಾಗಿ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿತ್ತು. 17 ದಿನಗಳ ನಂತರ ಕಾರ್ಮಿಕರು ಹೊರ ಬಂದಿದ್ದರು.

ಈ ಪ್ರಯತ್ನಕ್ಕೆ ಇವರ ತಂಡವನ್ನು ಇಡೀ ದೇಶವೇ ಕೊಂಡಾಡಿತ್ತು. ಇವರ ಶ್ರಮಕ್ಕೆ ಉತ್ತರಾಖಂಡದ ಮುಖ್ಯಮಂತ್ರಿ ಪರಿಹಾರ ಮೊತ್ತವನ್ನು ಘೋಷಿಸಿದ್ದರು. ಇದನ್ನು ಸ್ವೀಕರಿಸಲು ನಿರಾಕರಿಸಿದ್ದ ವಕೀಲ್ ಹಸನ್ ಅವರ ತಂಡ, “ನಾವು ದೇಶದ ಸೇವೆ ಮಾಡಿದ್ದೇವೆ. ಅದಕ್ಕಾಗಿ ನಮಗೆ ಹಣ ಬೇಡ” ಎಂದು ಮೊತ್ತವನ್ನು ಪಡೆದುಕೊಳ್ಳಲು ನಿರಾಕರಿಸಿದ್ದರು. ಅಂದು ಹೀರೋ ಆಗಿದ್ದ ವ್ಯಕ್ತಿ, ಇಂದು ಮನೆ ಕಳೆದುಕೊಂಡು ಬೀದಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಿಸಲಾಗಿದೆ.

ಈ ಘಟನೆಯನ್ನು ಖಂಡಿಸಿರುವ ಟಿಎಂಸಿಯ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ಮ ಇದೊಂದು ನಿಜಕ್ಕೂ ದುರಂತ ಮತ್ತು ನಾಚಿಕೆಗೇಡು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...