ಉತ್ತರಾಖಂಡದ ಸುರಂಗ ಕಾರ್ಮಿಕರನ್ನು ರಕ್ಷಿಸಿದ್ದ ವಕೀಲ್ ಹಸನ್ ಮನೆ ಧ್ವಂಸಗೊಳಿಸಿದ ದೆಹಲಿ ಅಭಿವೃದ್ಧಿ ಪ್ರಾಧಿಕಾರ!

Date:

Advertisements

ಉತ್ತರಾಖಂಡದ ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ಉಳಿಸಿದ್ದ ‘ಇಲಿ ಬಿಲ ಗಣಿಗಾರಿಕೆ’ (ರ‌್ಯಾಟ್ ಹೋಲ್‌ ಮೈನಿಂಗ್‌) ತಂತ್ರಗಾರಿಕೆ ಮೂಲಕ ರಂಧ್ರ ಕೊರೆಯುವ ಗುಂಪಿನ ನೇತೃತ್ವ ವಹಿಸಿದ್ದ ವಕೀಲ್ ಹಸನ್ ಅವರ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿರುವುದಾಗಿ ವರದಿಯಾಗಿದೆ.

ಅಕ್ರಮ ಒತ್ತುವರಿಯ ನೆಪವೊಡ್ಡಿ ಫೆಬ್ರವರಿ 28ರ ಬುಧವಾರದಂದು ಡಿಡಿಎ ಅಧಿಕಾರಿಗಳು ಬುಲ್ಡೋಜರ್ ಅನ್ನು ತಂದು ವಕೀಲ್ ಹಸನ್ ಅವರ ಮನೆಯನ್ನು ಕೆಡವಿದ್ದಾರೆ. ಅವರ ಮನೆಯನ್ನು ಧ್ವಂಸಗೊಳಿಸಿದಾಗ ಹಸನ್ ಅವರನ್ನು ಪೊಲೀಸರು ಬಂಧಿಸಿದ್ದರು ಎಂದು ತಿಳಿದುಬಂದಿದೆ.

“ಮನೆ ಕೆಡಹುವ ಮುನ್ನ ಡಿಡಿಎ ನನಗೆ ಯಾವುದೇ ನೋಟಿಸ್ ನೀಡಿರಲಿಲ್ಲ ಎಂದು ಹಸನ್ ತಿಳಿಸಿದ್ದು, “ಉತ್ತರಾಖಂಡದ ಕಾರ್ಮಿಕರನ್ನು ರಕ್ಷಿಸಿದಾಗ ನನಗೆ ಕೋಟಿ ರೂಪಾಯಿಯ ಬಹುಮಾನ ಘೋಷಿಸಿದ್ದರು. ಆದರೆ ನನಗೆ ನನ್ನ ಮನೆಯನ್ನು ಮಾತ್ರ ಬಹುಮಾನವಾಗಿ ನೀಡಿ ಎಂದು ಕೇಳಿದ್ದೆ. ಅದನ್ನು ನೀಡುವ ಬದಲಾಗಿ, ಡಿಡಿಎ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ನನ್ನ ಮನೆಯನ್ನು ಕೆಡವಿದ್ದಾರೆ” ಎಂದು ದೆಹಲಿಯಲ್ಲಿ ರಾಕ್‌ವೆಲ್ ಎಂಟರ್‌ಪ್ರೈಸಸ್ ಎಂಬ ರಾಟ್‌ ಹೋಲ್‌(Rat Miner) ಮೈನಿಂಗ್‌ ಸಂಸ್ಥೆ ನಡೆಸುತ್ತಿರುವ ವಕೀಲ್ ಹಸನ್ ತಿಳಿಸಿದ್ದಾರೆ.

Advertisements

ಕಳೆದ ವರ್ಷ ನವೆಂಬರ್ 15ರಂದು ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರನ್ನು ರಕ್ಷಿಸುವ ಎಲ್ಲ ಪ್ರಯತ್ನಗಳು ಫಲಪ್ರದವಾಗದಿದ್ದಾಗ,  ಹಸನ್ ಮತ್ತವರ ಇಲಿ ಗಣಿಗಾರರ ತಂಡವನ್ನು ಸಿಲ್ಕ್ಯಾರಾಕ್ಕೆ ಕರೆಸಲಾಗಿತ್ತು. ಇವರ ತಂಡದ ನಿರಂತರ ಶ್ರಮದ ಫಲವಾಗಿ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿತ್ತು. 17 ದಿನಗಳ ನಂತರ ಕಾರ್ಮಿಕರು ಹೊರ ಬಂದಿದ್ದರು.

ಈ ಪ್ರಯತ್ನಕ್ಕೆ ಇವರ ತಂಡವನ್ನು ಇಡೀ ದೇಶವೇ ಕೊಂಡಾಡಿತ್ತು. ಇವರ ಶ್ರಮಕ್ಕೆ ಉತ್ತರಾಖಂಡದ ಮುಖ್ಯಮಂತ್ರಿ ಪರಿಹಾರ ಮೊತ್ತವನ್ನು ಘೋಷಿಸಿದ್ದರು. ಇದನ್ನು ಸ್ವೀಕರಿಸಲು ನಿರಾಕರಿಸಿದ್ದ ವಕೀಲ್ ಹಸನ್ ಅವರ ತಂಡ, “ನಾವು ದೇಶದ ಸೇವೆ ಮಾಡಿದ್ದೇವೆ. ಅದಕ್ಕಾಗಿ ನಮಗೆ ಹಣ ಬೇಡ” ಎಂದು ಮೊತ್ತವನ್ನು ಪಡೆದುಕೊಳ್ಳಲು ನಿರಾಕರಿಸಿದ್ದರು. ಅಂದು ಹೀರೋ ಆಗಿದ್ದ ವ್ಯಕ್ತಿ, ಇಂದು ಮನೆ ಕಳೆದುಕೊಂಡು ಬೀದಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಿಸಲಾಗಿದೆ.

ಈ ಘಟನೆಯನ್ನು ಖಂಡಿಸಿರುವ ಟಿಎಂಸಿಯ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ಮ ಇದೊಂದು ನಿಜಕ್ಕೂ ದುರಂತ ಮತ್ತು ನಾಚಿಕೆಗೇಡು ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X