ಚಲಿಸುವಾಗಲೇ ಹೊತ್ತಿ ಉರಿದ ಬಸ್; ಇಬ್ಬರು ಮಕ್ಕಳು ಸೇರಿ ಐವರು ಸಾವು

Date:

Advertisements

ಖಾಸಗಿ ಬಸ್‌ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ನೋದ ಹೊರವಲಯದಲ್ಲಿರುವ ಮೋಹನ್ ಲಾಲ್‌ಗಂಜ್ ಪ್ರದೇಶದಲ್ಲಿ ಬಸ್‌ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸುವಷ್ಟರಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು, ಐವರು ದರ್ಮರಣ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಸ್‌ನಲ್ಲಿ ಸುಮಾರು 80 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಿಹಾರದ ಬೇಗುಸರಾಯ್‌ನಿಂದ ದೆಹಲಿಗೆ ಬಸ್‌ ತೆರಳುತ್ತಿತ್ತು. ಬಸ್‌ನ ಗೇರ್‌ಬಾಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿದ್ದು, ಅದರಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ” ಎಂದು ಮೋಹನ್ ಲಾಲ್‌ಗಂಜ್‌ನ ಸಹಾಯಕ ಪೊಲೀಸ್ ಆಯುಕ್ತ ರಜನೀಶ್ ವರ್ಮಾ ಹೇಳಿದ್ದಾರೆ.

Advertisements

“ಬೆಂಕಿ ಹೊತ್ತಿಕೊಂಡಾಗ ಹೆಚ್ಚಿನ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬೆಂಕಿ ವೇಗವಾಗಿ ವ್ಯಾಪಿಸಿದೆ. ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಬೆಂಕಿಯಿಂದ ತಪ್ಪಿಸಿಕೊಂಡು ಹೊರಬರಲಾಗದೆ, ಸಾವನ್ನಪ್ಪಿದ್ದಾರೆ. ಹಲವಾರು ಇತರ ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ” ಎಂದು ಅವರು ತಿಳಿಸಿದ್ದಾರೆ.

ಬೆಂಕಿಯ ಜ್ವಾಲೆಯು ಸುಮಾರು ಒಂದು ಕಿಲೋಮೀಟರ್ ದೂರದವರೆಗೂ ಗೋಚರಿಸುತ್ತಿತ್ತು. ಬೆಂಕಿ ಹೊತ್ತಿಕೊಂಡ ತಕ್ಷಣ ಬಸ್ ನಿಲ್ಲಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಅರ್ಧ ಗಂಟೆಯೊಳಗೆ ಬೆಂಕಿಯನ್ನು ನಂದಿಸಿದ್ದಾರೆ. ಬಸ್ಸಿನ ತುರ್ತು ನಿರ್ಗಮನ ಬಾಗಿಲು ತೆರೆಯಲು ವಿಫಲವಾದ ಕಾರಣ ಹಿಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು ಎಂಬುದು ಪೊಲೀಸ್‌ ತನಿಖೆಯಲ್ಲಿ ಗೊತ್ತಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X