ಊಟಿ – ಮೆಟ್ಟುಪಾಳ್ಯಂ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಬಸ್;‌ 8 ಮಂದಿ ಸಾವು

Date:

ಪ್ರವಾಸಿಗರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಮಂದಿ ಪ್ರವಾಸಿಗರು ಮೃತಪಟ್ಟು 42 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ.

- Advertisement -

ಮೃತರಲ್ಲಿ ಬಹುತೇಕರು ತಮಿಳುನಾಡಿನ ತೆಂಕಾಸಿಯ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿದ್ದ ಬಸ್, 9ನೇ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು 50 ಅಡಿ ಆಳವಾದ ಕಣಿವೆಗೆ ಉರುಳಿ ಬಿದ್ದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

“ಬಸ್‌ನಲ್ಲಿ 57 ಪ್ರವಾಸಿಗರು ಇದ್ದರು, ಇವರೆಲ್ಲ ಮೆಟ್ಟುಪಾಳ್ಯಂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಿಕೊಂಡು ಊಟಿಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಬಸ್‌ನ ಬ್ರೇಕ್ ಫೇಲಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ” ಎಂದು ತಮಿಳುನಾಡಿನ ಪೊಲೀಸರು ತಿಳಿಸಿದ್ದಾರೆ.

ಬಸ್​ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಅಲ್ಲದೇ ಸಿ ಎಂ ಸ್ಟಾಲಿನ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ, ರಕ್ಷಣಾ ಪ್ರಕ್ರಿಯೆ ಹೆಚ್ಚಿಸುವಂತೆ ಪ್ರವಾಸೋದ್ಯಮ ಸಚಿವ ಕೆ.ರಾಮಚಂದ್ರನ್ ಅವರಿಗೆ ಸೂಚಿಸಿದ್ದು, ಗಂಭೀರ ಮತ್ತು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವವರಿಗೆ ವಿಶೇಷ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಜ್ಜಿ ತಿಥಿ ಕಾರ್ಯಕ್ಕೆ ಬಂದಿದ್ದ ಕುಟುಂಬ ನೀರುಪಾಲು

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, “ಮೃತರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ, ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 1 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ನೀಡಲು ಆದೇಶಿಸಿದ್ದೇನೆ. ಮುಖ್ಯಮಂತ್ರಿಗಳ ಸಾಮಾನ್ಯ ಪರಿಹಾರ ನಿಧಿಯಿಂದ ನೆರವು ನೀಡಲಾಗುವುದು” ಎಂದಿದ್ದಾರೆ.

ಬಸ್ಸಿನಲ್ಲಿದ್ದವರ ಪತ್ತೆಗಾಗಿ ಮತ್ತು ಅವರ ಕುಟುಂಬಸ್ಥರಿಗಾಗಿ ಸರ್ಕಾರ ಸಹಾಯವಾಣಿ ಸಂಖ್ಯೆ 1077 ಮತ್ತು 9443763207 ಅನ್ನು ತೆರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...