ಉಪಚುನಾವಣೆ | 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ; ಉತ್ತರಾಖಂಡದಲ್ಲಿ ಘರ್ಷಣೆ

Date:

Advertisements

ಏಳು ರಾಜ್ಯಗಳಾದ್ಯಂತ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಬುಧವಾರ ಪ್ರಾರಂಭವಾಗಿದೆ. ಏಪ್ರಿಲ್-ಜೂನ್‌ನಲ್ಲಿ ನಡೆದ ಲೋಕಸಭೆ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಬಿಹಾರದ ರುಪೌಲಿ, ಪಶ್ಚಿಮ ಬಂಗಾಳದ ರಾಯ್‌ಗಂಜ್, ರಣಘಾಟ್ ದಕ್ಷಿಣ, ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್‌ನ ಜಲಂಧರ್ ಪಶ್ಚಿಮ, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಗಢದಲ್ಲಿ ಚುನಾವಣೆ ನಡೆಯುತ್ತಿದೆ.

ಬೆಳಗ್ಗೆ 9 ಗಂಟೆಯವರೆಗೆ ರುಪೌಲಿಯಲ್ಲಿ ಶೇ.9.23, ರಾಯಗಂಜ್‌ನಲ್ಲಿ ಶೇ.10.01, ರಣಘಾಟ್ ದಕ್ಷಿಣದಲ್ಲಿ ಶೇ.11.58, ಬಾಗ್ದಾದಲ್ಲಿ ಶೇ.10.61, ಮಾಣಿಕ್ತಾಲಾದಲ್ಲಿ ಶೇ.9.01, ವಿಕ್ರವಾಂಡಿಯಲ್ಲಿ ಶೇ.12.94, ಅಮರವಾರದಲ್ಲಿ ಶೇ.16.90, ಬದರಿನಾಥದಲ್ಲಿ ಶೇ.6.50, ಮಂಗಳೌರ್‌ನಲ್ಲಿ ಶೇ.8.58, ಜಲಂಧರ್ ಪಶ್ಚಿಮದಲ್ಲಿ ಶೇ.10.30, ಡೆಹ್ರಾದಲ್ಲಿ ಶೇ.15.70, ಹಮೀರ್‌ಪುರದಲ್ಲಿ ಶೇ.15.71 ಮತ್ತು ನಲಗಢದಲ್ಲಿ ಶೇ.16.48 ಮತದಾನವಾಗಿದೆ.

Advertisements

ಇದನ್ನು ಓದಿದ್ದೀರಾ?   ಉಪಚುನಾವಣೆ | ಕುಟುಂಬದ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ: ಡಿಕೆ ಶಿವಕುಮಾರ್

ಉತ್ತರಾಖಂಡದಲ್ಲಿ ಮತದಾನದ ವೇಳೆ ಘರ್ಷಣೆ

ಉತ್ತರಾಖಂಡದ ಮಂಗಳೌರ್‌ನಲ್ಲಿ ಮತದಾನದ ನಡುವೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಮಂಗಳೌರ್‌ನ ಕಾಂಗ್ರೆಸ್ ಅಭ್ಯರ್ಥಿ ಖಾಜಿ ನಿಜಾಮುದ್ದೀನ್, “ದುಷ್ಕರ್ಮಿಗಳು ಬಹಿರಂಗವಾಗಿ ಗುಂಡು ಹಾರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ಆಂಬ್ಯುಲೆನ್ಸ್ ಅಥವಾ ಯಾವುದೇ ವ್ಯವಸ್ಥೆ ಇರಲಿಲ್ಲ” ಎಂದು ಹೇಳಿದರು.

ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಎಸ್‌ಪಿ ಸ್ವಪನ್ ಕಿಶೋರ್ ಸಿಂಗ್, “ಇಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ. ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿವಾದವೊಂದರ ಬಗ್ಗೆ ನಮಗೆ ಮಾಹಿತಿ ಬಂದಿದೆ. ಅದಕ್ಕಾಗಿಯೇ ನಾವು ಇಲ್ಲಿದ್ದೇವೆ. ಗುಂಡು ಹಾರಿಸಿರುವ ವಿಚಾರ ಇನ್ನೂ ದೃಢಪಟ್ಟಿಲ್ಲ” ಎಂದು ಹೇಳಿದರು.

ಹಾಲಿ ಶಾಸಕರ ನಿಧನ ಮತ್ತು ವಿವಿಧ ಪಕ್ಷಗಳಿಗೆ ರಾಜೀನಾಮೆ ನೀಡಿದ ಕಾರಣ ತೆರವಾದ ಸ್ಥಾನಗಳಲ್ಲಿ ಉಪಚುನಾವಣೆ ನಡೆಸಲಾಗುತ್ತಿದೆ. ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಸ್ಪರ್ಧೆ ನೀಡಿದ ಇಂಡಿಯಾ ಒಕ್ಕೂಟ ಉಪಚುನಾವಣೆಯಲ್ಲಿಯೂ ಅಧಿಕ ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X