ರೈಲ್ವೆ ಸಿಬ್ಬಂದಿಗೆ ₹1968.87 ಕೋಟಿ ಬೋನಸ್ ನೀಡಲು ಸಚಿವ ಸಂಪುಟ ಅನುಮೋದನೆ

Date:

Advertisements

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2022-23ನೇ ಹಣಕಾಸು ವರ್ಷದಲ್ಲಿ ರೈಲ್ವೆ ಸಿಬ್ಬಂದಿಗೆ 78 ದಿನದ ವೇತನಕ್ಕೆ ಸಮನಾದ ಉತ್ಪಾದನೆ ಆಧಾರಿತ ಬೋನಸ್ (ಪಿಎಲ್‌ಬಿ) ನೀಡಲು ಅನುಮೋದನೆ ನೀಡಿದೆ.

ಇದರಲ್ಲಿ ರೈಲ್ವೆಯ ಎಲ್ಲ ಅರ್ಹ ಸಿಬ್ಬಂದಿ ಅಂದರೆ, ಟ್ರ್ಯಾಕ್‌ ನಿರ್ವಾಹಕರು, ಲೋಕೋ ಪೈಲಟ್‌ಗಳು, ಟ್ರೈನ್ ಮ್ಯಾನೇಜರ್ (ಗಾರ್ಡ್ಸ್), ಸ್ಟೇಷನ್ ಮಾಸ್ಟರ್, ಸೂಪರ್ ವೈಸರ್ಸ್, ಟೆಕ್ನಿಷಿಯನ್ಸ್, ಟೆಕ್ನಿಷಿಯನ್ ಹೆಲ್ಪರ್ಸ್, ಪಾಯಿಂಟ್ಸಮನ್, ಸಚಿವಾಲಯದ ಸಿಬ್ಬಂದಿ ಮತ್ತು ಗ್ರೂಪ್ ಸಿ ಸಿಬ್ಬಂದಿ (ಆರ್‌ಪಿಎಫ್ ಮತ್ತು ಆರ್‌ಪಿಎಸ್‌ಎಫ್ ಹೊರತುಪಡಿಸಿ) ಈ ಪಿಎಲ್‌ಬಿ ಪಡೆಯಲಿದ್ದಾರೆ.

“ರೈಲ್ವೆ ಸಿಬ್ಬಂದಿಯ ಅತ್ಯುತ್ತಮ ಸಾಧನೆಯನ್ನು ಗುರುತಿಸಿ, ಕೇಂದ್ರ ಸರ್ಕಾರವು 11,07,346 ರೈಲ್ವೆ ಉದ್ಯೋಗಿಗಳಿಗೆ ₹1968.87 ಕೋಟಿ ಪಿಎಲ್‌ಬಿ ಪಾವತಿಗೆ ಅನುಮೋದನೆ ನೀಡಿದೆ” ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

Advertisements

2022-2023ರಲ್ಲಿ ರೈಲ್ವೆಯ ಸಾಧನೆ ಉತ್ತಮವಾಗಿತ್ತು. ರೈಲ್ವೆಯು 1509 ಮಿಲಿಯನ್ ಟನ್‌ಗಳ ದಾಖಲೆಯ ಸರಕುಗಳನ್ನು ಲೋಡ್ ಮಾಡಿದೆ. ಸುಮಾರು 6.5 ಬಿಲಿಯನ್ ಪ್ರಯಾಣಿಕರನ್ನು ಸಾಗಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮಯ ಪರಿಪಾಲನೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಪ್ರಥಮ

“ಈ ದಾಖಲೆಯ ಸಾಧನೆಗೆ ಹಲವು ಅಂಶಗಳು ಕೊಡುಗೆ ನೀಡಿವೆ. ರೈಲ್ವೆಯಲ್ಲಿ ಸರ್ಕಾರದಿಂದ ದಾಖಲೆಯ ಬಂಡವಾಳ ವೆಚ್ಚದ ಹರಿವು ಹೆಚ್ಚಾಗಿರುವುದರಿಂದ ಮೂಲಸೌಕರ್ಯದಲ್ಲಿನ ಸುಧಾರಣೆ, ಕಾರ್ಯಾಚರಣೆಗಳಲ್ಲಿ ದಕ್ಷತೆ ಮತ್ತು ಉತ್ತಮ ತಂತ್ರಜ್ಞಾನ ಇತ್ಯಾದಿಗಳು ಸೇರಿವೆ. ಪಿಎಲ್‌ಬಿ ಪಾವತಿಯು ರೈಲ್ವೇ ಉದ್ಯೋಗಿಗಳನ್ನು ಮತ್ತಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲು ಉತ್ತೇಜಿಸಲು ಪ್ರೋತ್ಸಾಹ ನೀಡಲಿದೆ” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X