ನೀಟ್ ಪತ್ರಿಕೆ ಬೇಕಾದ್ರೆ 30 ಸಾವಿರ ರೂ. ನೀಡಿ; ವಿಡಿಯೋ ಕರೆಯಲ್ಲಿ ಬೇಡಿಕೆ: ತನಿಖೆ ಆರಂಭ

Date:

ನೀಟ್ ಮರುಪರೀಕ್ಷೆಯನ್ನು ಲಕ್ಷಾಂತರ ವಿದ್ಯಾರ್ಥಿಗಳು ಬರೆಯುತ್ತಿರುವ ನಡುವೆಯೇ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಂಚನೆ ಆರೋಪದ ಬಗ್ಗೆ ಅಜ್ಮೀರ್ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ವಿಡಿಯೋ ಕರೆ ಮಾಡಿದ ವ್ಯಕ್ತಿಯೊಬ್ಬ ನೀಟ್ ಪತ್ರಿಕೆ ಬೇಕಾದರೆ 30 ಸಾವಿರ ರೂಪಾಯಿ ನೀಡಿ ಎಂದು ಬೇಡಿಕೆ ಇಟ್ಟಿರುವುದಾಗಿ ಆರೋಪಿಸಲಾಗಿದೆ.

- Advertisement -

ಡಿಎವಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಸಿಂಗ್ ಠಾಕೂರ್ ವಿಡಿಯೋ ಕರೆ ಮೂಲಕ ನೀಟ್ ಪ್ರಶ್ನೆ ಪತ್ರಿಕೆ ಎಂದು ಹೇಳಿಕೊಂಡು ವಿದ್ಯಾರ್ಥಿಗಳಿಗೆ ಯಾವುದೋ ಪತ್ರಿಕೆ ತೋರಿಸಿ ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. “ಕಾಲೇಜಿನ ಹೊಸ ವಿದ್ಯಾರ್ಥಿಯೊಬ್ಬರು ನನಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಪರಿಶೀಲಿಸಲು ನಾನೇ ಆ ಸಂಖ್ಯೆಗೆ ಕರೆ ಮಾಡಿದೆ” ಎಂದು ಕೃಷ್ಣ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: 37 ದಿನಗಳಲ್ಲಿ 12 ಬಲಿ: ವಿದ್ಯಾರ್ಥಿಗಳನ್ನು ‘ಸೈಕಲಾಜಿಕಲ್ ಬರ್ನ್‌ಔಟ್’ಗೆ ತಳ್ಳುವ ನೀಟ್ ಮರುಪರೀಕ್ಷೆ ಒತ್ತಡ!

ಈ ಬಗ್ಗೆ ಶನಿವಾರ ಹೇಳಿಕೆ ನೀಡಿದ ಠಾಕೂರ್, “ನೀಟ್ ಪರೀಕ್ಷೆ ನಾಳೆ (ಇಂದು-ಜೂನ್ 21) ನಡೆಯಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲಾಗುತ್ತಿದೆ, ಸುಲಿಗೆ ಮಾಡಲಾಗುತ್ತಿದೆ. ನನಗೆ ಒಂದು ಪ್ರಶ್ನೆ ಪತ್ರಿಕೆಯನ್ನು ತೋರಿಸಲಾಯಿತು. ಅದಕ್ಕಾಗಿ 30,000 ರೂ. ಪಾವತಿಸುವಂತೆ ತಿಳಿಸಲಾಯಿತು. ನಾನು ಈ ಬಗ್ಗೆ ರೆಕಾರ್ಡಿಂಗ್ ಅನ್ನು ದೂರಿನಲ್ಲಿ ಸಲ್ಲಿಸಿದ್ದೇನೆ. ಕರೆ ಮಾಡಿದವರು ಕ್ಯೂಆರ್ ಕೋಡ್ ಅನ್ನು ಸಹ ಕಳುಹಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಈಗಾಗಲೇ ಹಲವಾರು ವಿದ್ಯಾರ್ಥಿಗಳು ಇಂತಹ ವಂಚನೆಗೆ ಬಲಿಯಾಗಿದ್ದಾರೆ. ಪರೀಕ್ಷಾ ತಯಾರಿಯತ್ತ ಗಮನಹರಿಸುವಂತೆ ಅಭ್ಯರ್ಥಿಗಳಿಗೆ ಠಾಕೂರ್ ಮನವಿ ಮಾಡಿದ್ದಾರೆ. ಹಾಗೆಯೇ ಘಟನೆಯ ಬಗ್ಗೆ ತಿಳಿಸಲು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹಿಮಾಂಶು ಜಂಗಿದ್ ಅವರನ್ನು ಭೇಟಿ ಮಾಡಿ ಕ್ಯೂಆರ್ ಕೋಡ್ ಮತ್ತು ಕರೆ ಮಾಡಿದವರ ಸಂಖ್ಯೆ ಸೇರಿದಂತೆ ಡಿಜಿಟಲ್ ಪುರಾವೆಗಳನ್ನು ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ದೂರಿನ ಆಧಾರದಲ್ಲಿ ತನಿಖೆ ಆರಂಭವಾಗಿದೆ. ಪೊಲೀಸರು ಮೊಬೈಲ್ ಸಂಖ್ಯೆ ಮತ್ತು ಕ್ಯೂಆರ್ ಕೋಡ್‌ಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯ ಸ್ಥಳವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಮುಖ್ಯವಾಗಿ ವಿಡಿಯೋ ಕರೆಯ ವೇಳೆ ಪ್ರದರ್ಶಿಸಲಾದ ಪ್ರಶ್ನೆ ಪತ್ರಿಕೆ ನಿಜವಾಗಿಯೂ ನೀಟ್ ಪ್ರಶ್ನೆಪತ್ರಿಕೆ ಅಥವಾ ನಕಲಿಯೇ ಎಂಬ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಮೇ 3ರಂದು ನೀಟ್ ಪರೀಕ್ಷೆ ನಡೆದಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆಯನ್ನೇ ರದ್ದುಪಡಿಸಲಾಗಿತ್ತು. ಇದೀಗ ಇಂದು ಮರುಪರೀಕ್ಷೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...