ತಾಯಿಯನ್ನು ಕೊಂದು, ಬೇಯಿಸಿ ತಿಂದಿದ್ದ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿದ ಬಾಂಬೆ ಹೈಕೋರ್ಟ್

Date:

Advertisements

ತನ್ನ ತಾಯಿಯನ್ನು ಕೊಂದು ದೇಹದ ಕೆಲವು ಭಾಗಗಳನ್ನು ತಿಂದಿದ್ದ ವ್ಯಕ್ತಿಗೆ ಕೊಲ್ಲಾಪುರ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಇದು ನರಭಕ್ಷಕತೆಯ ಪ್ರಕರಣ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ಅಪರಾಧಿ ಸುನಿಲ್ ಕುಚ್ಕೋರವಿಗೆ ಮರಣದಂಡನೆಯನ್ನು ವಿಧಿಸಿದೆ. ಇದು ನರಭಕ್ಷಕತೆಯ ಪ್ರಕರಣವಾಗಿದ್ದು, ಇದು ಅಪರೂಪದ ಅಪರೂಪದ ವರ್ಗಕ್ಕೆ ಸೇರುತ್ತದೆ ಎಂದು ಪೀಠ ಹೇಳಿದೆ.

“ಈ ಪ್ರಕರಣವು ಅಪರೂಪದಲ್ಲಿ ಅಪರೂಪದ ಪ್ರಕರಣದ ಅಡಿಯಲ್ಲಿ ಬರುತ್ತದೆ. ಅಪರಾಧಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದು ಮಾತ್ರವಲ್ಲದೆ ಆಕೆಯ ದೇಹದ ಭಾಗಗಳಾದ ಮೆದುಳು, ಹೃದಯ, ಯಕೃತ್ತು, ಮೂತ್ರಪಿಂಡ, ಕರುಳುಗಳನ್ನು ತೆಗೆದು ಬಾಣಲೆಯಲ್ಲಿ ಬೇಯಿಸುತ್ತಿದ್ದ” ಎಂದು ಹೈಕೋರ್ಟ್ ಹೇಳಿದೆ.

Advertisements

ಇದನ್ನು ಓದಿದ್ದೀರಾ? ಸಂಬಂಧಿಯನ್ನು ಕಚ್ಚಿದ ನಾಯಿಯನ್ನೇ ಕೊಂದು ತಿಂದ ವ್ಯಕ್ತಿ; ಬಂಧನ

“ತನ್ನ ತಾಯಿಯ ಪಕ್ಕೆಲುಬುಗಳನ್ನು ಬೇಯಿಸಿ ತಿಂದು, ಕೊನೆಯಲ್ಲಿ ಹೃದಯವನ್ನು ಬೇಯಿಸಿ ತಿನ್ನಲು ಹೊರಟ್ಟಿದ್ದನು. ಇದು ನರಭಕ್ಷಕತೆಯ ಪ್ರಕರಣವಾಗಿದೆ. ಇದು ನರಭಕ್ಷಕ ಪ್ರವೃತ್ತಿ ಆಗಿರುವುದರಿಂದ ಅಪರಾಧಿಯ ಸುಧಾರಣೆಗೆ ಯಾವುದೇ ಅವಕಾಶವಿಲ್ಲ. ಜೀವಾವಧಿ ಶಿಕ್ಷೆ ನೀಡಿದರೆ, ಜೈಲಿನಲ್ಲಿಯೂ ಇದೇ ರೀತಿಯ ಅಪರಾಧ ಮಾಡುವ ಅಪಾಯವಿದೆ” ಎಂದು ಕೋರ್ಟ್ ಅಭಿಪ್ರಾಯಿಸಿದೆ.

ವರದಿ ಪ್ರಕಾರ ಸುನಿಲ್ ಕುಚ್ಕೋರವಿ ತನ್ನ 63 ವರ್ಷದ ತಾಯಿ ಯಲ್ಲಮ್ಮ ರಾಮಾ ಕುಚ್ಕೋರವಿಯನ್ನು 2017ರ ಆಗಸ್ಟ್ 28ರಂದು ಕೊಲ್ಲಾಪುರ ನಗರದ ತಮ್ಮ ನಿವಾಸದಲ್ಲಿ ಭೀಕರವಾಗಿ ಹತ್ಯೆ ಮಾಡಿದ್ದನು. ಬಳಿಕ ದೇಹವನ್ನು ಕತ್ತರಿಸಿ, ಬಾಣಲೆಯಲ್ಲಿ ಬೇಯಿಸಿ ಕೆಲವು ಅಂಗಗಳನ್ನು ತಿಂದಿದ್ದಾನೆ.

ಮದ್ಯ ಖರೀದಿಸಲು ತಾಯಿ ಹಣ ನೀಡಲಿಲ್ಲ ಎಂಬ ಕಾರಣದಿಂದಾಗಿ ಸುನಿಲ್ ಕುಚ್ಕೋರವಿ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಕೊಲ್ಲಾಪುರ ನ್ಯಾಯಾಲಯವು 2021ರಲ್ಲಿ ಮರಣದಂಡನೆ ವಿಧಿಸಿತ್ತು. ಅಪರಾಧಿ ತನ್ನ ವಿರುದ್ಧದ ಆರೋಪವನ್ನು ಪ್ರಶ್ನಿಸಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದನು. ಈ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಕೊಲ್ಲಾಪುರ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X