ತಾಯಿಯನ್ನು ಕೊಂದು, ಬೇಯಿಸಿ ತಿಂದಿದ್ದ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿದ ಬಾಂಬೆ ಹೈಕೋರ್ಟ್

Date:

ತನ್ನ ತಾಯಿಯನ್ನು ಕೊಂದು ದೇಹದ ಕೆಲವು ಭಾಗಗಳನ್ನು ತಿಂದಿದ್ದ ವ್ಯಕ್ತಿಗೆ ಕೊಲ್ಲಾಪುರ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಇದು ನರಭಕ್ಷಕತೆಯ ಪ್ರಕರಣ ಎಂದು ಹೇಳಿದೆ.

- Advertisement -

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ಅಪರಾಧಿ ಸುನಿಲ್ ಕುಚ್ಕೋರವಿಗೆ ಮರಣದಂಡನೆಯನ್ನು ವಿಧಿಸಿದೆ. ಇದು ನರಭಕ್ಷಕತೆಯ ಪ್ರಕರಣವಾಗಿದ್ದು, ಇದು ಅಪರೂಪದ ಅಪರೂಪದ ವರ್ಗಕ್ಕೆ ಸೇರುತ್ತದೆ ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಈ ಪ್ರಕರಣವು ಅಪರೂಪದಲ್ಲಿ ಅಪರೂಪದ ಪ್ರಕರಣದ ಅಡಿಯಲ್ಲಿ ಬರುತ್ತದೆ. ಅಪರಾಧಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದು ಮಾತ್ರವಲ್ಲದೆ ಆಕೆಯ ದೇಹದ ಭಾಗಗಳಾದ ಮೆದುಳು, ಹೃದಯ, ಯಕೃತ್ತು, ಮೂತ್ರಪಿಂಡ, ಕರುಳುಗಳನ್ನು ತೆಗೆದು ಬಾಣಲೆಯಲ್ಲಿ ಬೇಯಿಸುತ್ತಿದ್ದ” ಎಂದು ಹೈಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? ಸಂಬಂಧಿಯನ್ನು ಕಚ್ಚಿದ ನಾಯಿಯನ್ನೇ ಕೊಂದು ತಿಂದ ವ್ಯಕ್ತಿ; ಬಂಧನ

“ತನ್ನ ತಾಯಿಯ ಪಕ್ಕೆಲುಬುಗಳನ್ನು ಬೇಯಿಸಿ ತಿಂದು, ಕೊನೆಯಲ್ಲಿ ಹೃದಯವನ್ನು ಬೇಯಿಸಿ ತಿನ್ನಲು ಹೊರಟ್ಟಿದ್ದನು. ಇದು ನರಭಕ್ಷಕತೆಯ ಪ್ರಕರಣವಾಗಿದೆ. ಇದು ನರಭಕ್ಷಕ ಪ್ರವೃತ್ತಿ ಆಗಿರುವುದರಿಂದ ಅಪರಾಧಿಯ ಸುಧಾರಣೆಗೆ ಯಾವುದೇ ಅವಕಾಶವಿಲ್ಲ. ಜೀವಾವಧಿ ಶಿಕ್ಷೆ ನೀಡಿದರೆ, ಜೈಲಿನಲ್ಲಿಯೂ ಇದೇ ರೀತಿಯ ಅಪರಾಧ ಮಾಡುವ ಅಪಾಯವಿದೆ” ಎಂದು ಕೋರ್ಟ್ ಅಭಿಪ್ರಾಯಿಸಿದೆ.

ವರದಿ ಪ್ರಕಾರ ಸುನಿಲ್ ಕುಚ್ಕೋರವಿ ತನ್ನ 63 ವರ್ಷದ ತಾಯಿ ಯಲ್ಲಮ್ಮ ರಾಮಾ ಕುಚ್ಕೋರವಿಯನ್ನು 2017ರ ಆಗಸ್ಟ್ 28ರಂದು ಕೊಲ್ಲಾಪುರ ನಗರದ ತಮ್ಮ ನಿವಾಸದಲ್ಲಿ ಭೀಕರವಾಗಿ ಹತ್ಯೆ ಮಾಡಿದ್ದನು. ಬಳಿಕ ದೇಹವನ್ನು ಕತ್ತರಿಸಿ, ಬಾಣಲೆಯಲ್ಲಿ ಬೇಯಿಸಿ ಕೆಲವು ಅಂಗಗಳನ್ನು ತಿಂದಿದ್ದಾನೆ.

ಮದ್ಯ ಖರೀದಿಸಲು ತಾಯಿ ಹಣ ನೀಡಲಿಲ್ಲ ಎಂಬ ಕಾರಣದಿಂದಾಗಿ ಸುನಿಲ್ ಕುಚ್ಕೋರವಿ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಕೊಲ್ಲಾಪುರ ನ್ಯಾಯಾಲಯವು 2021ರಲ್ಲಿ ಮರಣದಂಡನೆ ವಿಧಿಸಿತ್ತು. ಅಪರಾಧಿ ತನ್ನ ವಿರುದ್ಧದ ಆರೋಪವನ್ನು ಪ್ರಶ್ನಿಸಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದನು. ಈ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಕೊಲ್ಲಾಪುರ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಸೇನಾ ಪಡೆಗೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಯಾವುದೇ ದೈಹಿಕ ಅಥವಾ ಮಾನಸಿಕ ಅನಾರೋಗ್ಯ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...