ಸಿದ್ಧಾಂತಕ್ಕಾಗಿ ಜೈಲಿಗೆ ಹಾಕಲು ಸಾಧ್ಯವಿಲ್ಲ: ನಿಷೇಧಿತ ‘ಪಿಎಫ್ಐ’ನ ನಾಯಕನಿಗೆ ಸುಪ್ರೀಂನಲ್ಲಿ ಜಾಮೀನು

Date:

Advertisements

ಸಿದ್ಧಾಂತದ ಕಾರಣಕ್ಕಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್‌, ನಿಷೇಧಿತ ಪಿಎಫ್‌ಐ ಸಂಘಟನೆಯ ನಾಯಕ ಅಬ್ದುಲ್‌ ಸತ್ತಾರ್‌ ಅವರಿಗೆ ಜಾಮೀನು ನೀಡಿದೆ.

2022ರ ಏಪ್ರಿಲ್ 16ರಂದು ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್ ಕೊಲೆ ಪ್ರಕರಣದಲ್ಲಿ ಅಬ್ದುಲ್ ಸತ್ತಾರ್ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ಕೊಲೆ ಪಿತೂರಿ ರೂಪಿಸಿದ ಆರೋಪ ಹೊರಿಸಲಾಗಿತ್ತು. ಆ ಕೊಲೆಗೂ ತಮಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದ ಮುಖ್ಯ ಎಫ್‌ಐಆರ್‌ನಲ್ಲೂ ನನ್ನ ಹೆಸರಿಲ್ಲ ಎಂದು ವಾದಿಸಿದ್ದ ಸತ್ತಾರ್ ಅವರಿಗೆ ಜಾಮೀನು ನೀಡಲು ಈ ಹಿಂದೆ ಕೇರಳ ಹೈಕೋರ್ಟ್‌ ನಿರಾಕರಿಸಿತ್ತು.

ಹೈಕೋರ್ಟ್‌ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಸತ್ತಾರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ದ ಪೀಠವು ಸತ್ತಾರ್ ಅವರಿಗೆ ಜಾಮೀನು ನೀಡಿದೆ.

Advertisements

ಜಾಮೀನು ನೀಡುವ ಆದೇಶದಲ್ಲಿ ನ್ಯಾಯಮೂರ್ತಿ ಓಕಾ ಅವರು, “ಸಿದ್ಧಾಂತದ ಕಾರಣಕ್ಕಾಗಿ ಯಾರನ್ನಾದರೂ ಜೈಲಿಗೆ ಹಾಕಲು ಸಾಧ್ಯವಿಲ್ಲ. ಇತ್ತೀಚೆಗೆ, ಸಿದ್ಧಾಂತದ ಕಾರಣಕ್ಕಾಗಿ ಜೈಲಿಗಟ್ಟುವ ಟ್ರೆಂಡ್‌ ಹೆಚ್ಚುತ್ತಿದೆ. ಅವರು ನಿರ್ದಿಷ್ಟ ಸಿದ್ಧಾಂತವನ್ನು ಅಳವಡಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಜೈಲಿಗೆ ಹಾಕಲಾಗುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ವೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪರವಾಗಿ ಹಾಜರಾಗಿದ್ದ ವಕೀಲರು, “ಕೊಲೆಗೆ ಸಂಬಂಧಿಸಿದ ಮುಖ್ಯ ಎಫ್ಐಆರ್‌ನಲ್ಲಿ ಸತ್ತಾರ್ ಹೆಸರಿಲ್ಲದಿದ್ದರೂ, ಪಿಎಫ್ಐ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯಕರ್ತರ ನೇಮಕಾತಿ ಮತ್ತು ಶಸ್ತ್ರಾಸ್ತ್ರ ತರಬೇತಿಗೆ ಸಂಬಂಧಿಸಿದಂತೆ ಸತ್ತಾರ್ ಅವರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X