ಗರ್ಭಪಾತ ಮಾಡಿಸದಂತೆ ಅತ್ಯಾಚಾರ ಸಂತ್ರಸ್ತೆಯನ್ನು ಒತ್ತಾಯಿಸಲಾಗದು: ಹೈಕೋರ್ಟ್‌

Date:

Advertisements

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯು ಬಯಸದ ಗರ್ಭದಾರಣೆಯನ್ನು ಉಳಿಸಿಕೊಳ್ಳುವಂತೆ, ಗರ್ಭಪಾತ ಮಾಡಿಸಿಕೊಳ್ಳದಂತೆ ಒತ್ತಾಯಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಜೊತೆಗೆ 28 ವಾರಗಳ ಗರ್ಭಿಣಿಯಾಗಿರುವ 12 ವರ್ಷದ ಬಾಲಕಿಗೆ ವೈದ್ಯಕೀಯ ತಜ್ಞರ ವರದಿಯ ಹೊರತಾಗಿಯೂ ಗರ್ಭಪಾತ ಮಾಡಲು ಅವಕಾಶ ನೀಡಿದೆ.

ಆಕೆಯ ಇಚ್ಛೆಗೆ ವಿರುದ್ಧವಾಗಿ ಮಗುವಿಗೆ ಜನ್ಮ ನೀಡುವಂತೆ ಒತ್ತಾಯಿಸಿದರೆ, ನ್ಯಾಯಾಲಯವು ‘ಆಕೆಯ ಜೀವನದ ಹಾದಿಯನ್ನು’ ನಿರ್ಧರಿಸುವ ಹಕ್ಕನ್ನು ಕಸಿದುಕೊಳ್ಳುವಂತೆ ಆಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? 30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಅನುಮತಿ

Advertisements

ಬಾಲಕಿಯನ್ನು ಪರೀಕ್ಷಿಸಿದ ನಂತರ ವೈದ್ಯಕೀಯ ಮಂಡಳಿಯು, ಬಾಲಕಿಯ ವಯಸ್ಸು ಮತ್ತು ಭ್ರೂಣದ ಬೆಳವಣಿಗೆಯ ಹಂತವನ್ನು ಪರಿಗಣಿಸಿ ಗರ್ಭಪಾತ ಮಾಡಿಸಿಕೊಳ್ಳುವುದು ಹೆಚ್ಚು ಅಪಾಯಕಾರಿ ಎಂದು ಅಭಿಪ್ರಾಯಪಟ್ಟಿತ್ತು.

ಆದರೆ ನ್ಯಾಯಮೂರ್ತಿಗಳಾದ ನಿತಿನ್ ಸಾಂಬ್ರೆ ಮತ್ತು ಸಚಿನ್ ದೇಶಮುಖ್ ಅವರ ಪೀಠವು ಜೂನ್ 17ರ ಆದೇಶದಲ್ಲಿ ಗರ್ಭಪಾತವನ್ನು ಅನುಮತಿಸಬೇಕಾಗುತ್ತದೆ ಎಂದು ಆದೇಶಿಸಿದೆ.

“ಈ ನ್ಯಾಯಾಲಯವು ಸಂತ್ರಸ್ತೆಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಗರ್ಭ ಧರಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ನಾವು ಹಾಗೆ ಒತ್ತಾಯಿಸಿದರೆ ಆಕೆಯ ಜೀವನದ ತಕ್ಷಣದ ಮತ್ತು ದೀರ್ಘಾವಧಿಯ ಮಾರ್ಗವನ್ನು ನಿರ್ಧರಿಸುವ ಹಕ್ಕನ್ನು ಕಸಿದುಕೊಂಡಂತೆ ಆಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಮಹಿಳೆ ವಿವಾಹವಾಗದೆಯೇ ಆಕೆಯ ಆಯ್ಕೆಯ ಮೂಲಕ ಗರ್ಭಿಣಿಯಾಗಬಹುದು. ಆದಾಗ್ಯೂ ಆಕೆ ಬಯಸದ ಗರ್ಭದ ಹೊರೆಯನ್ನು ಆಕೆಯ ಮೇಲೆಯೇ ಹಾಕಲಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಗರ್ಭಪಾತಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಬಾಲಕಿಯ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X