16ನೇ ಜನಗಣತಿಯೊಂದಿಗೆ ಜಾತಿ ಗಣತಿ, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ

Date:

Advertisements

ಸುಮಾರು 16 ವರ್ಷಗಳ ನಂತರ ಬಹು ನಿರೀಕ್ಷಿತ ಭಾರತದ 16ನೇ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

2026ರ ಅಕ್ಟೋಬರ್ 1ರಿಂದ ಆರಂಭಿಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲನೆಯ ಹಂತ 2026ರ ಅ. 1ರಿಂದ ನಡೆಯಲಿದ್ದು, 2ನೇ ಹಂತ, 2027ರ ಮಾ. 1ರಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಜೂ. 16ರಂದು ಹೊರಡಿಸಿರುವ ಗೆಜೆಟ್ ನೋಟಿಫಿಕೇಷನ್ ನಲ್ಲಿ (ಕೇಂದ್ರ ಸರ್ಕಾರದ ಅಧಿಕೃತ ರಾಜ್ಯಪತ್ರ) ತಿಳಿಸಿದೆ.

ಮೊದಲ ಹಂತದಲ್ಲಿ ಲಡಾಖ್ ಕೇಂದ್ರಾಡಳಿತ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಹಿಮದಿಂದ ಆವೃತವಲ್ಲದ ಸಿಂಕ್ರೊನಸ್ ಅಲ್ಲದ ಪ್ರದೇಶಗಳಲ್ಲಿ ಸರ್ವೇ ನಡೆಯಲಿದ್ದು, ಈ ಪ್ರದೇಶಗಳಿಗೆ ಸಂಬಂಧಿಸಿದಂತೆ, ಉಲ್ಲೇಖ ದಿನಾಂಕವು ಅಕ್ಟೋಬರ್ 1, 2026 ಎಂದು ಪ್ರಕಟಣೆ ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಯುಪಿಎ ಸರ್ಕಾರ 2011ರಲ್ಲಿ ನಡೆಸಿದ ಜಾತಿ ಗಣತಿಯ ವಿವರಗಳು ಬಿಡುಗಡೆ ಆಗಲಿಲ್ಲವೇಕೆ?

ಸರ್ಕಾರದ ಪ್ರಕಾರ, ಈ ಬಾರಿ ಜನಗಣತಿಯು ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ. ಇದಕ್ಕಾಗಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಜಿಟಲ್ ತಂತ್ರಜ್ಞಾನವನ್ನು ಬಳಸುವುದರಿಂದ ದತ್ತಾಂಶ ಸಂಗ್ರಹಣೆ ಮತ್ತು ವಿಶ್ಲೇಷಣೆ ಸುಲಭವಾಗುತ್ತದೆ .ಸುಮಾರು 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು ಈ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ, ಡಿಜಿಟಲ್ ಸಾಧನಗಳನ್ನು ಹೊಂದಿರುವ 1.3 ಲಕ್ಷ ಜನಗಣತಿ ಕಾರ್ಯಕರ್ತರು ಕಾರ್ಯ ನಿರ್ವಹಿಸಲಿದ್ದಾರೆ.

ಕೇಂದ್ರ ಸರ್ಕಾರವು ಈ ಬಾರಿ ನಡೆಸಲಿರುವ 16ನೇ ಜನಗಣತಿಯ ಸಂದರ್ಭದಲ್ಲೇ ಜಾತಿ ಗಣತಿಯನ್ನು ಸೇರಿಸುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮೇ 2ರಂದು ನಡೆದಿದ್ದ ಕೇಂದ್ರ ಸಂಪುಟ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ.

WhatsApp Image 2025 06 16 at 2.54.08 PM 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X